September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಡಾಯಿಕಲ್ಲಿಗೆ ಸಿಡಿಲು ಬಡಿದು ಕಾಣಿಸಿಕೊಂಡ ಬೆಂಕಿ

ನಡ: ಇಲ್ಲಿಯ ಯಾತ್ರಿಕರ ನೆಚ್ಚಿನ ತಾಣ ಗಡಾಯಿಕಲ್ಲಿಗೆ ಮೇ 23 ರಂದು ಸಂಜೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ವರದಿಯಾಗಿದೆ.


ಸಂಜೆ ತಾಲೂಕಿನಾದ್ಯಂತ ಸಿಡಿಲು ಸಹಿತ ಮಳೆ ಬಂದಿದ್ದು, ಗಡಾಯಿಕಲ್ಲಿನ ಒಂದು ಭಾಗಕ್ಕೆ ಸಿಡಿಲು ಬಡಿದಿದೆ. ಇದರಿಂದಾಗಿ ಬೆಂಕಿ ಕಾಣಿಸಕೊಂಡು ಹೊತ್ತಿ ಹುರಿದಿದೆ. ಅದಾಗಾಲೆ ಮಳೆ ಆರಂಭಗೊಂಡಿದ್ದರಿಂದ ಬೆಂಕಿ ನಂದಿ ಹೋಗಿದೆ ಎಂದು ನಡ ಗ್ರಾಮದ ಸಮಾಜ ಸೇವಕ ಶ್ಯಾಮಸುಂದರ್ ತಿಳಿಸಿದ್ದಾರೆ. ಕಳೆದ ವರ್ಷವೂ ಇದೇ ಭಾಗಕ್ಕೆ ಸಿಡಿಲು ಬಡಿದು, ಕಲ್ಲಿನ ಸ್ವಲ್ಪ ಭಾಗ ಸಿಡಿದು ಹೋಗಿತ್ತು. ಆಗ ದೊಡ್ಡ ಶಬ್ದವಾಗಿ ನಾಗರಿಕರಲ್ಲಿ ಆತಂಕ ಸೃಷ್ಟಿಯಾಗಿತ್ತು.

ಆದರೆ ಈ ಭಾರಿ ಅಂತಹ ಶಬ್ದ ಕೇಳಿ ಬಂದಿಲ್ಲ ಎಂದು ಶ್ಯಾಮಸುಂದರ್ ತಿಳಿಸಿದ್ದಾರೆ. ಸಿಡಿಲು ಬಡಿದು ಬೆಂಕಿ ಕಂಡು ಬಂದಾಗ ಸ್ಥಳೀಯರು ಇದನ್ನು ಮೊಬೈಲ್‌ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ.

Related posts

ಗುಂಡೂರಿ: ಕೊಯಂದೂರು ನಿವಾಸಿ ಗಿರಿಜ ನಿಧನ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಕಲಾ ಕೇಂದ್ರದಲ್ಲಿ ಯಕ್ಷಗಾನದ ನೂತನ ರಂಗಸ್ಥಳದ ಚೌಕಟ್ಟು ಉದ್ಘಾಟನೆ

Suddi Udaya

ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬೆಳಾಲು ಪ್ರೌಢಶಾಲೆಯ ಭೇಟಿ, ಮಕ್ಕಳೊಂದಿಗೆ ಮಾತುಕತೆ

Suddi Udaya
error: Content is protected !!