ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮೂಲಗೇಣಿದಾರರಿಗೆ ಸರಕಾರ ಶೀಘ್ರವೇ ನ್ಯಾಯ ಒದಗಿಸಲಿ: ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಕರ್ನಾಟಕದಲ್ಲಿ 2012 ರಲ್ಲಿ ಇದ್ದ ಬಿಜೆಪಿ ಸರಕಾರ ಡಾ.ವಿ.ಎಸ್.ಆಚಾರ್ ಅವರ ವಿಶೇಷ ಮುತುವರ್ಜಿಯಲ್ಲಿ ಕರಾವಳಿಯ ಮೂಲಗೇಣಿದಾರರಿಗೆ ಸಂಪೂರ್ಣ ಹಕ್ಕು ನೀಡುವ ಕುರಿತು ಕರ್ನಾಟಕ ಕಾಯ್ದೆ ಸಂಖ್ಯೆ 24/2012 ನ್ನು ರೂಪಿಸಿತ್ತು. ಕರ್ನಾಟಕ ಮೂಲಗೇಣಿ ಅಥವಾ ಒಳಮೂಲಗೇಣಿದಾರರಿಗೆ ಸಂಪೂರ್ಣ ಮಾಲಕತ್ವ ಪ್ರದಾನ ಮಾಡುವ ಅಧಿನಿಯಮ ಸಿಂಧುತ್ವವನ್ನು ಪ್ರಶ್ನಿಸಿ ರಿಟ್ ಅರ್ಜಿ ಸಂಖ್ಯೆ 11158/2013 ಮತ್ತು ಇತರ ಅರ್ಜಿಗಳನ್ನು ಹೈಕೋರ್ಟ್ ಗೆ ಮೂಲಿದಾರರು ಸಲ್ಲಿಸಿದ್ದರು .

ರಾಜ್ಯ ಸರಕಾರದ ಈ ಅಧಿನಿಯಮ ಮಾಡುವ ಅಧಿಕಾರವನ್ನು ಪ್ರಶ್ನಿಸಿ, ಮೂಲಿದಾರರು ತಮ್ಮ ಮೂಲಭೂತ ಹಕ್ಕುಗಳಿಗೆ ಇದು ವಿರುದ್ಧವಾಗಿದೆ ಎಂದು ಪ್ರತಿಪಾದನೆ ಮಾಡಿದರು. ಈ ರಿಟ್ ಅರ್ಜಿಗಳನ್ನು ಉಚ್ಚ ನ್ಯಾಯಾಲಯವು ವಜಾಗೊಳಿಸಿ ಸರಕಾರಕ್ಕೆ ಈ ಕುರಿತು ಅಧಿನಿಯಮವನ್ನು ಮಾಡುವ ಅಧಿಕಾರವಿದೆ ಎಂದು ತೀರ್ಪು ನೀಡಿದೆ.

ಇದರಿಂದಾಗಿ ದಶಕಗಳಿಂದ ಸಂಪೂರ್ಣ ಹಕ್ಕಿಗಾಗಿ ಕಾಯುತ್ತಿರುವ ಕರಾವಳಿಯ ಸಾವಿರಾರು ಮೂಲಗೇಣಿದಾರರಿಗೆ ಅಧಿಕಾರ ಸಿಗುವ ದಿಕ್ಕಿನಲ್ಲಿ ದಾರಿ ಸುಗಮವಾಗಿದೆ. ಸರಕಾರ ತಕ್ಷಣವೇ ಕಾರ್ಯಪ್ರವೃತ್ತರಾಗಿ ಮುಂದಿನ ಮೊದಲ ಅಧಿವೇಶನದಲ್ಲಿಯೇ ಪರಿಹಾರಕ್ಕಾಗಿ ಜಾತಕಪಕ್ಷಿಯಂತೆ ಕಾಯುತ್ತಿರುವ ಮೂಲ ಗೇಣಿದಾರರಿಗೆ ನ್ಯಾಯ ನೀಡುವಲ್ಲಿ ಕಾರ್ಯಪ್ರವೃತ್ತರಾಗಬೇಕು ಮತ್ತು ಯಾವುದೇ ಕಾರಣಕ್ಕೆ ವಿಳಂಬನೀತಿ ಅನುಸರಿಸದೆ ತಕ್ಷಣ ಜಾರಿಗೊಳಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ಆಗ್ರಹಿಸಿದ್ದಾರೆ.

Related posts

ನಾವೂರು ಸರಕಾರಿ ಪ್ರೌಢ ಶಾಲೆಯ ಗಣಿತ ಶಿಕ್ಷಕಿ ಪುಷ್ಪರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಮಾಜಿ ಅಧ್ಯಕ್ಷ ಕೇಶವ ಗೌಡ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿನಿ ಭಗವದ್ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಸಿದ್ದೇಶ್ವರ ಶ್ರೀ ಗಳ ಅಂತ್ಯಕ್ರಿಯೆಗೆ ಶಾಂತಿಯಿಂದ ಸಹಕರಿಸಿ: ಬೊಮ್ಮಾಯಿ ಮನವಿ

Suddi Udaya
error: Content is protected !!