25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮೂಲಗೇಣಿದಾರರಿಗೆ ಸರಕಾರ ಶೀಘ್ರವೇ ನ್ಯಾಯ ಒದಗಿಸಲಿ: ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಕರ್ನಾಟಕದಲ್ಲಿ 2012 ರಲ್ಲಿ ಇದ್ದ ಬಿಜೆಪಿ ಸರಕಾರ ಡಾ.ವಿ.ಎಸ್.ಆಚಾರ್ ಅವರ ವಿಶೇಷ ಮುತುವರ್ಜಿಯಲ್ಲಿ ಕರಾವಳಿಯ ಮೂಲಗೇಣಿದಾರರಿಗೆ ಸಂಪೂರ್ಣ ಹಕ್ಕು ನೀಡುವ ಕುರಿತು ಕರ್ನಾಟಕ ಕಾಯ್ದೆ ಸಂಖ್ಯೆ 24/2012 ನ್ನು ರೂಪಿಸಿತ್ತು. ಕರ್ನಾಟಕ ಮೂಲಗೇಣಿ ಅಥವಾ ಒಳಮೂಲಗೇಣಿದಾರರಿಗೆ ಸಂಪೂರ್ಣ ಮಾಲಕತ್ವ ಪ್ರದಾನ ಮಾಡುವ ಅಧಿನಿಯಮ ಸಿಂಧುತ್ವವನ್ನು ಪ್ರಶ್ನಿಸಿ ರಿಟ್ ಅರ್ಜಿ ಸಂಖ್ಯೆ 11158/2013 ಮತ್ತು ಇತರ ಅರ್ಜಿಗಳನ್ನು ಹೈಕೋರ್ಟ್ ಗೆ ಮೂಲಿದಾರರು ಸಲ್ಲಿಸಿದ್ದರು .

ರಾಜ್ಯ ಸರಕಾರದ ಈ ಅಧಿನಿಯಮ ಮಾಡುವ ಅಧಿಕಾರವನ್ನು ಪ್ರಶ್ನಿಸಿ, ಮೂಲಿದಾರರು ತಮ್ಮ ಮೂಲಭೂತ ಹಕ್ಕುಗಳಿಗೆ ಇದು ವಿರುದ್ಧವಾಗಿದೆ ಎಂದು ಪ್ರತಿಪಾದನೆ ಮಾಡಿದರು. ಈ ರಿಟ್ ಅರ್ಜಿಗಳನ್ನು ಉಚ್ಚ ನ್ಯಾಯಾಲಯವು ವಜಾಗೊಳಿಸಿ ಸರಕಾರಕ್ಕೆ ಈ ಕುರಿತು ಅಧಿನಿಯಮವನ್ನು ಮಾಡುವ ಅಧಿಕಾರವಿದೆ ಎಂದು ತೀರ್ಪು ನೀಡಿದೆ.

ಇದರಿಂದಾಗಿ ದಶಕಗಳಿಂದ ಸಂಪೂರ್ಣ ಹಕ್ಕಿಗಾಗಿ ಕಾಯುತ್ತಿರುವ ಕರಾವಳಿಯ ಸಾವಿರಾರು ಮೂಲಗೇಣಿದಾರರಿಗೆ ಅಧಿಕಾರ ಸಿಗುವ ದಿಕ್ಕಿನಲ್ಲಿ ದಾರಿ ಸುಗಮವಾಗಿದೆ. ಸರಕಾರ ತಕ್ಷಣವೇ ಕಾರ್ಯಪ್ರವೃತ್ತರಾಗಿ ಮುಂದಿನ ಮೊದಲ ಅಧಿವೇಶನದಲ್ಲಿಯೇ ಪರಿಹಾರಕ್ಕಾಗಿ ಜಾತಕಪಕ್ಷಿಯಂತೆ ಕಾಯುತ್ತಿರುವ ಮೂಲ ಗೇಣಿದಾರರಿಗೆ ನ್ಯಾಯ ನೀಡುವಲ್ಲಿ ಕಾರ್ಯಪ್ರವೃತ್ತರಾಗಬೇಕು ಮತ್ತು ಯಾವುದೇ ಕಾರಣಕ್ಕೆ ವಿಳಂಬನೀತಿ ಅನುಸರಿಸದೆ ತಕ್ಷಣ ಜಾರಿಗೊಳಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ಆಗ್ರಹಿಸಿದ್ದಾರೆ.

Related posts

ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘದ ವತಿಯಿಂದ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಕುತ್ಲೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya

ಬೆಳ್ತಂಗಡಿ :ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಮತ್ತು ರವಿಶಂಕರ್ ಗುರೂಜಿ

Suddi Udaya

ಲಾಯಿಲ: ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ದೇವರ ಆಶೀರ್ವಾದ ಕ್ಷೇತ್ರದ ಮೇಲಿರಲಿದೆ. ಭಗವಂತ ನಮ್ಮೊಂದಿಗೆ ಇದ್ದಾರೆ: ಡಾ.ಹೆಗ್ಗಡೆ

Suddi Udaya
error: Content is protected !!