September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

ಕೊಕ್ಕಡ : ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ಸಾಮಾನ್ಯ ಸಭೆಯು ಕೊಕ್ಕಡ ಮರಿಯಾಕ್ರಪಾ ಕಚೇರಿಯಲ್ಲಿ ಮೇ. 23 ರಂದು ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ಜಿತೇಶ್ ಎಲ್ ಪಿರೇರಾ ವಹಿಸಿದ್ದರು.

ವಲಯ 15 ವಲಯಾಡಳಿತ ಸಮಿತಿ ಸಭೆಯನ್ನು ಕೊಕ್ಕಡ ಘಟಕದ ಆತಿಥ್ಯದಲ್ಲಿ ಮೇ. 28 ರಂದು ನಡೆಸಲು ನಿರ್ಧರಿಸಲಾಯಿತು.

ಜೂನ್ ತಿಂಗಳಲ್ಲಿ ಬ್ರಹತ್ ರಕ್ತದಾನ ಶಿಬಿರ, ರಕ್ತದಾನಿಗಳಗೆ ಅಭಿನಂದನೆ ನಡೆಸುವುದು. ಜೇಸಿ ಫೌಂಡೇಶನಿಗೆ ಹೆಚ್. ಜಿ.ಎಫ್. ಕೊಡುಗೆಯನ್ನು ನೀಡುವುದು, ಊರಿನ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಣೆ, ಮಧ್ಯಂತರ ಸಮ್ಮೇಳನದಲ್ಲಿ ಭಾಗವಹಿಸುವುದು. ನೂರರಷ್ಟು ಶೇಕಡಾ ಫಲಿತಾಂಶ ಸಾಧಿಸಿದ ಪ್ರೌಢ ಶಾಲೆಗಳಿಗೆ ಅಭಿನಂದನೆ ಸಮರ್ಪಣೆ, ಕ್ಯಾನ್ಸರ್ ಪೀಡಿತ ಬಡ ಮಹಿಳೆಗೆ ಸಹಾಯಧನ ನೀಡಲು ನಿರ್ಧರಿಸಲಾಗಿದೆ.

ನಿಕಟಪೂರ್ವ ಅಧ್ಯಕ್ಷ ಕೆ. ಶ್ರೀಧರ್ ರಾವ್ ಶುಭ ಹಾರೈಸಿದರು. ಯುವ ಜೇಸಿ ಶ್ರವಣ್ ವರದಿ ವಾಚಿಸಿದರು.

ಉಪಾಧ್ಯಕ್ಷರಾದ ಯು.ನರಸಿಂಹ ನಾಯಕ್, ಹರಿಶ್ಚಂದ್ರ ಆಚಾರ್ಯ, ಹಿರಿಯ ಸದಸ್ಯ ಜೋಸೆಫ್ ಪಿರೇರಾ ಸಲಹೆ ಸೂಚನೆಗಳನ್ನು ನೀಡಿದರು. ಕೋಶಾಧಿಕಾರಿ ಜಸ್ವಂತ್ ಪಿರೇರಾ ವಂದಿಸಿದರು.

Related posts

ಧರ್ಮಸ್ಥಳ ಬೊಳಿಯಾರ್‌ನ 15ನೇ ಸ್ಥಳದಲ್ಲಿ ಪತ್ತೆಯಾಗದ ಶವದ ಅವಶೇಷಗಳು

Suddi Udaya

ಹಳೆಪೇಟೆ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಮೊಗ್ರು: ಕಡಮ್ಮಾಜೆ ಫಾರ್ಮ್ ನಲ್ಲಿ 3ನೇ ವರ್ಷದ ಜೇನು ಕೃಷಿ ಮಾಹಿತಿ ಶಿಬಿರ

Suddi Udaya

ತಣ್ಣೀರುಪಂತ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೋತ್ಸವ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಒರಿಂಟೇಷನ್ ಕಾರ್ಯಕ್ರಮ

Suddi Udaya

ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ

Suddi Udaya
error: Content is protected !!