ಶಾಸಕರಿಂದ ವಿವಾದಾತ್ಮಕ ಹೇಳಿಕೆ ಆರೋಪಿಸಿ ಮಹಿಳಾ ಕಾಂಗ್ರೆಸ್ ನಿಂದ ಠಾಣೆಗೆ ದೂರು

Suddi Udaya

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರು ಮೇ 22 ರಂದು ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನಾ ಕಾರ್ಯಕ್ರಮದ ಭಾಷಣದಲ್ಲಿ ಸಿದ್ದರಾಮಯ್ಯರವರು 24 ಹಿಂದು ಕಾರ್ಯಕರ್ತರನ್ನು ಕೊಲೆಮಾಡಿದ್ದಾರೆಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ ಎಂದು ಆರೋಪಿಸಿ, ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ , ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಇಂದು ಬೆಳ್ತಂಗಡಿ ಠಾಣೆಗೆ ದೂರು ನೀಡಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಶ್ರೀಮತಿ ನಮಿತ ಕೆ ಪೂಜಾರಿ, ಉಪಾಧ್ಯಕ್ಷರಾದ ಶ್ರೀಮತಿ ಮಮತಾ ,ಪ್ರಧಾನ ಕಾರ್ಯದರ್ಶಿ ಸುಮಂಗಳ ನಾಯ್ಕ್ ,ಕಾರ್ಯದರ್ಶಿ ಶ್ರೀಮತಿ ಸಿಂಧೂ ಡಿನ್ನಿಸ್, ಶ್ರೀಮತಿ ರೇವತಿ ಉಜಿರೆ ಸದಸ್ಯರಾದ ಕಸ್ತೂರಿ ಪೂಜಾರಿ ,ಶ್ರೀಮತಿ ಕುಸುಮ ಮಾಚಾರು ಉಪಸ್ಥಿತರಿದ್ದರು.

Leave a Comment

error: Content is protected !!