24 C
ಪುತ್ತೂರು, ಬೆಳ್ತಂಗಡಿ
April 3, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

ಕೊಕ್ಕಡ : ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ಸಾಮಾನ್ಯ ಸಭೆಯು ಕೊಕ್ಕಡ ಮರಿಯಾಕ್ರಪಾ ಕಚೇರಿಯಲ್ಲಿ ಮೇ. 23 ರಂದು ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ಜಿತೇಶ್ ಎಲ್ ಪಿರೇರಾ ವಹಿಸಿದ್ದರು.

ವಲಯ 15 ವಲಯಾಡಳಿತ ಸಮಿತಿ ಸಭೆಯನ್ನು ಕೊಕ್ಕಡ ಘಟಕದ ಆತಿಥ್ಯದಲ್ಲಿ ಮೇ. 28 ರಂದು ನಡೆಸಲು ನಿರ್ಧರಿಸಲಾಯಿತು.

ಜೂನ್ ತಿಂಗಳಲ್ಲಿ ಬ್ರಹತ್ ರಕ್ತದಾನ ಶಿಬಿರ, ರಕ್ತದಾನಿಗಳಗೆ ಅಭಿನಂದನೆ ನಡೆಸುವುದು. ಜೇಸಿ ಫೌಂಡೇಶನಿಗೆ ಹೆಚ್. ಜಿ.ಎಫ್. ಕೊಡುಗೆಯನ್ನು ನೀಡುವುದು, ಊರಿನ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಣೆ, ಮಧ್ಯಂತರ ಸಮ್ಮೇಳನದಲ್ಲಿ ಭಾಗವಹಿಸುವುದು. ನೂರರಷ್ಟು ಶೇಕಡಾ ಫಲಿತಾಂಶ ಸಾಧಿಸಿದ ಪ್ರೌಢ ಶಾಲೆಗಳಿಗೆ ಅಭಿನಂದನೆ ಸಮರ್ಪಣೆ, ಕ್ಯಾನ್ಸರ್ ಪೀಡಿತ ಬಡ ಮಹಿಳೆಗೆ ಸಹಾಯಧನ ನೀಡಲು ನಿರ್ಧರಿಸಲಾಗಿದೆ.

ನಿಕಟಪೂರ್ವ ಅಧ್ಯಕ್ಷ ಕೆ. ಶ್ರೀಧರ್ ರಾವ್ ಶುಭ ಹಾರೈಸಿದರು. ಯುವ ಜೇಸಿ ಶ್ರವಣ್ ವರದಿ ವಾಚಿಸಿದರು.

ಉಪಾಧ್ಯಕ್ಷರಾದ ಯು.ನರಸಿಂಹ ನಾಯಕ್, ಹರಿಶ್ಚಂದ್ರ ಆಚಾರ್ಯ, ಹಿರಿಯ ಸದಸ್ಯ ಜೋಸೆಫ್ ಪಿರೇರಾ ಸಲಹೆ ಸೂಚನೆಗಳನ್ನು ನೀಡಿದರು. ಕೋಶಾಧಿಕಾರಿ ಜಸ್ವಂತ್ ಪಿರೇರಾ ವಂದಿಸಿದರು.

Related posts

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಸ್ಪಂದನಾ ಸೇವಾ ಸಂಘದ ಯೋಜನೆಯಿಂದ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ಭೇಟಿ

Suddi Udaya

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ನೀಟ್ ಸಾಧಕ ಆದಿತ್ ಜೈನ್ ಗೆ ಸನ್ಮಾನ

Suddi Udaya
error: Content is protected !!