32.9 C
ಪುತ್ತೂರು, ಬೆಳ್ತಂಗಡಿ
March 6, 2026
ಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಶ್ರೀ ಧ. ಮಂ.  ಆಂಗ್ಲ ಮಾಧ್ಯಮ  ಶಾಲೆಯಲ್ಲಿ  ಆಂಗ್ಲಭಾಷಾ ಶಿಕ್ಷಕರ  ಕಾರ್ಯಾಗಾರ

ಧರ್ಮಸ್ಥಳ :ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ  ಶಾಲೆ ಯಲ್ಲಿ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಶಯದಂತೆ ಆಂಗ್ಲಭಾಷಾ ಶಿಕ್ಷಕರ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಈ  ಆಂಗ್ಲಭಾಷಾ ಕಾರ್ಯಾಗಾರದಲ್ಲಿ ವ್ಯಾಕರಣವನ್ನು ಸುಲಭವಾಗಿ ವಿದ್ಯಾರ್ಥಿಗಳಿಗೆ ತಲುಪಿಸುವ ರೀತಿ, ಅದಕ್ಕಾಗಿ ಇರುವ ಸುಲಭ ಉಪಾಯಗಳು ,ಚಟುವಟಿಕೆಗಳು ವ್ಯಾಕರಣದಲ್ಲಿ ಸಾಮಾನ್ಯವಾಗಿ ಮಾಡುವ ಸಣ್ಣ ಪುಟ್ಟ ತಪ್ಪುಗಳು, ಆಂಗ್ಲಭಾಷಾ ಅಕ್ಷರಗಳ ಉಚ್ಚಾರಣೆ, ವ್ಯತ್ಯಾಸ, ಇತ್ಯಾದಿಗಳನ್ನು ಸಂಪನ್ಮೂಲ ವ್ಯಕ್ತಿ ಶಂಕರನಾರಾಯಣ ಕಡಂದಲೆ ನಿವೃತ್ತ ಮುಖ್ಯ ಶಿಕ್ಷಕರು, ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆ, ಕಡಂದಲೆ ಇವರು ಅತ್ಯಂತ ಮಾರ್ಮಿಕವಾಗಿ ನಿರ್ವಹಿಸಿದರು . 

ಕಾರ್ಯಾಗಾರದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗೆ ಒಳಪಟ್ಟ ಆಂಗ್ಲಭಾಷಾ ಶಿಕ್ಷಕರು ಭಾಗವಹಿಸಿದ್ದರು. ಧರ್ಮಸ್ಥಳ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವ ರ ಆಂಗ್ಲ ಮಾಧ್ಯಮ ಶಾಲೆಯ  ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ. ವಿ ಅತಿಥಿ ಅಭ್ಯಾಗತರನ್ನು ಸ್ವಾಗತಿಸಿದರು. ಶಾಲೆಯ ಪ್ರಾರಂಭಕ್ಕೂ ಮುನ್ನ ನಡೆಸಿದಂತಹ ಈ ಕಾರ್ಯಗಾರ ಶಿಕ್ಷಕರುಗಳಲ್ಲಿ ಆಂಗ್ಲ ಭಾಷೆಯ ಕುರಿತಾದ  ಹೊಸ ವಿಚಾರಗಳನ್ನು ಅರಿಯಲು ಸಹಕಾರಿಯಾಯಿತು. 

Related posts

ಪಿಲ್ಯ- ಕುದ್ಯಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ

Suddi Udaya

ಎಸ್.ಡಿ.ಎಮ್ ಮಹಿಳಾ ಐ.ಟಿ.ಐ ಯಲ್ಲಿ ಎನ್.ಸಿ.ವಿ.ಟಿ ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿ ಆರಂಭ

Suddi Udaya

ಬೆಳ್ತಂಗಡಿ ನ.ಪಂ. ಮುಂಭಾಗ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಭಿವೃದ್ಧಿ ಹೆಸರಲ್ಲಿ ದೂಳು ತಿನ್ನಿಸಬೇಡಿ, ರಸ್ತೆ ಅಗಲೀಕರಣ ಜನಸ್ನೇಹಿಯಾಗಿರಲಿ, ರಸ್ತೆ ಬೇಕು ದೂಳು ಬೇಡ ನಾಮಫಲಕ ಅಳವಡಿಕೆ:

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಉಜಿರೆಯ ಬಿರ್ಕು ರವರಿಗೆ ಮೊಬೈಲ್ ಹಸ್ತಾಂತರ

Suddi Udaya

ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಉಡುಪಿ ಪೇಜಾವರ ಸ್ವಾಮೀಜಿ ಬೇಟಿ

Suddi Udaya
error: Content is protected !!