25.5 C
ಪುತ್ತೂರು, ಬೆಳ್ತಂಗಡಿ
April 24, 2026
ಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಶ್ರೀ ಧ. ಮಂ.  ಆಂಗ್ಲ ಮಾಧ್ಯಮ  ಶಾಲೆಯಲ್ಲಿ  ಆಂಗ್ಲಭಾಷಾ ಶಿಕ್ಷಕರ  ಕಾರ್ಯಾಗಾರ

ಧರ್ಮಸ್ಥಳ :ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ  ಶಾಲೆ ಯಲ್ಲಿ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಶಯದಂತೆ ಆಂಗ್ಲಭಾಷಾ ಶಿಕ್ಷಕರ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಈ  ಆಂಗ್ಲಭಾಷಾ ಕಾರ್ಯಾಗಾರದಲ್ಲಿ ವ್ಯಾಕರಣವನ್ನು ಸುಲಭವಾಗಿ ವಿದ್ಯಾರ್ಥಿಗಳಿಗೆ ತಲುಪಿಸುವ ರೀತಿ, ಅದಕ್ಕಾಗಿ ಇರುವ ಸುಲಭ ಉಪಾಯಗಳು ,ಚಟುವಟಿಕೆಗಳು ವ್ಯಾಕರಣದಲ್ಲಿ ಸಾಮಾನ್ಯವಾಗಿ ಮಾಡುವ ಸಣ್ಣ ಪುಟ್ಟ ತಪ್ಪುಗಳು, ಆಂಗ್ಲಭಾಷಾ ಅಕ್ಷರಗಳ ಉಚ್ಚಾರಣೆ, ವ್ಯತ್ಯಾಸ, ಇತ್ಯಾದಿಗಳನ್ನು ಸಂಪನ್ಮೂಲ ವ್ಯಕ್ತಿ ಶಂಕರನಾರಾಯಣ ಕಡಂದಲೆ ನಿವೃತ್ತ ಮುಖ್ಯ ಶಿಕ್ಷಕರು, ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆ, ಕಡಂದಲೆ ಇವರು ಅತ್ಯಂತ ಮಾರ್ಮಿಕವಾಗಿ ನಿರ್ವಹಿಸಿದರು . 

ಕಾರ್ಯಾಗಾರದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗೆ ಒಳಪಟ್ಟ ಆಂಗ್ಲಭಾಷಾ ಶಿಕ್ಷಕರು ಭಾಗವಹಿಸಿದ್ದರು. ಧರ್ಮಸ್ಥಳ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವ ರ ಆಂಗ್ಲ ಮಾಧ್ಯಮ ಶಾಲೆಯ  ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ. ವಿ ಅತಿಥಿ ಅಭ್ಯಾಗತರನ್ನು ಸ್ವಾಗತಿಸಿದರು. ಶಾಲೆಯ ಪ್ರಾರಂಭಕ್ಕೂ ಮುನ್ನ ನಡೆಸಿದಂತಹ ಈ ಕಾರ್ಯಗಾರ ಶಿಕ್ಷಕರುಗಳಲ್ಲಿ ಆಂಗ್ಲ ಭಾಷೆಯ ಕುರಿತಾದ  ಹೊಸ ವಿಚಾರಗಳನ್ನು ಅರಿಯಲು ಸಹಕಾರಿಯಾಯಿತು. 

Related posts

ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಸಂಘದ ಸಮಾವೇಶ- ಬೆಳ್ತಂಗಡಿಯವರು ಭಾಗಿ

Suddi Udaya

ಧರ್ಮಸ್ಥಳ ಭಜನಾ ಪರಿಷತ್ ಪದಾಧಿಕಾರಿಗಳ ವಾರ್ಷಿಕ ಸಭೆ

Suddi Udaya

ಮುಂಡಾಜೆ: ನೀಲಮ್ಮ ನಾಯ್ಕ ನಿಧನ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ  ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಲ್ಲಿ ವರ್ಷ ಕಾಮತ್ ರಿಂದ ಟೆಮ್ ದಿ ಟೈಮ್ ತರಬೇತಿ ಕಾರ್ಯಾಗಾರ

Suddi Udaya
error: Content is protected !!