22.6 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಶ್ರೀ ಧ. ಮಂ.  ಆಂಗ್ಲ ಮಾಧ್ಯಮ  ಶಾಲೆಯಲ್ಲಿ  ಆಂಗ್ಲಭಾಷಾ ಶಿಕ್ಷಕರ  ಕಾರ್ಯಾಗಾರ

ಧರ್ಮಸ್ಥಳ :ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ  ಶಾಲೆ ಯಲ್ಲಿ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಶಯದಂತೆ ಆಂಗ್ಲಭಾಷಾ ಶಿಕ್ಷಕರ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಈ  ಆಂಗ್ಲಭಾಷಾ ಕಾರ್ಯಾಗಾರದಲ್ಲಿ ವ್ಯಾಕರಣವನ್ನು ಸುಲಭವಾಗಿ ವಿದ್ಯಾರ್ಥಿಗಳಿಗೆ ತಲುಪಿಸುವ ರೀತಿ, ಅದಕ್ಕಾಗಿ ಇರುವ ಸುಲಭ ಉಪಾಯಗಳು ,ಚಟುವಟಿಕೆಗಳು ವ್ಯಾಕರಣದಲ್ಲಿ ಸಾಮಾನ್ಯವಾಗಿ ಮಾಡುವ ಸಣ್ಣ ಪುಟ್ಟ ತಪ್ಪುಗಳು, ಆಂಗ್ಲಭಾಷಾ ಅಕ್ಷರಗಳ ಉಚ್ಚಾರಣೆ, ವ್ಯತ್ಯಾಸ, ಇತ್ಯಾದಿಗಳನ್ನು ಸಂಪನ್ಮೂಲ ವ್ಯಕ್ತಿ ಶಂಕರನಾರಾಯಣ ಕಡಂದಲೆ ನಿವೃತ್ತ ಮುಖ್ಯ ಶಿಕ್ಷಕರು, ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆ, ಕಡಂದಲೆ ಇವರು ಅತ್ಯಂತ ಮಾರ್ಮಿಕವಾಗಿ ನಿರ್ವಹಿಸಿದರು . 

ಕಾರ್ಯಾಗಾರದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗೆ ಒಳಪಟ್ಟ ಆಂಗ್ಲಭಾಷಾ ಶಿಕ್ಷಕರು ಭಾಗವಹಿಸಿದ್ದರು. ಧರ್ಮಸ್ಥಳ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವ ರ ಆಂಗ್ಲ ಮಾಧ್ಯಮ ಶಾಲೆಯ  ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ. ವಿ ಅತಿಥಿ ಅಭ್ಯಾಗತರನ್ನು ಸ್ವಾಗತಿಸಿದರು. ಶಾಲೆಯ ಪ್ರಾರಂಭಕ್ಕೂ ಮುನ್ನ ನಡೆಸಿದಂತಹ ಈ ಕಾರ್ಯಗಾರ ಶಿಕ್ಷಕರುಗಳಲ್ಲಿ ಆಂಗ್ಲ ಭಾಷೆಯ ಕುರಿತಾದ  ಹೊಸ ವಿಚಾರಗಳನ್ನು ಅರಿಯಲು ಸಹಕಾರಿಯಾಯಿತು. 

Related posts

ಕುಕ್ಕೇಡಿ: ಮೇಸ್ತ್ರೀ ಕೆಲಸ ನಿರ್ವಹಿಸುತ್ತಿದ್ದಾಗ ಆಕಸ್ಮಿಕವಾಗಿ ಬಿದ್ದು ಯುವಕ ಸಾವು

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಿಂದ ಬೆಳ್ತಂಗಡಿ, ಬಂಟ್ವಾಳ, ಮೂಡುಬಿದಿರೆ, ಉಪ್ಪಿನಂಗಡಿ ಭಾಗಗಳಿಂದ ಕಾಲೇಜು ಬಸ್ ಸೌಲಭ್ಯ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ಏ.24-26: ಕುಂಡದಬೆಟ್ಟು ಮಖಾಂ ಶರೀಫ್ ಉರೂಸ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya

ಎಕ್ಸಲೆ೦ಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

Suddi Udaya
error: Content is protected !!