24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯ ಬಿ.ಕೆ ಧನಂಜಯ ರಾವ್ ರವರ ನೂತನ ಕಚೇರಿ ರಾವ್ ಅಸೋಸಿಯೇಟ್ಸ್ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿಯ ಖ್ಯಾತ ವಕೀಲರಾದ ಬಿ.ಕೆ ಧನಂಜಯ ರಾವ್ ಇವರ ರಾವ್ ಅಸೋಸಿಯೆಟ್ಸ್ ನೂತನ ವಕೀಲರ ಕಚೇರಿಯ ಉದ್ಘಾಟನಾ ಸಮಾರಂಭ ಮೇ 24 ರಂದು ಬೆಳ್ತಂಗಡಿಯ ಮಹಿಳಾ ವೃಂದದ ಕಟ್ಟಡದಲ್ಲಿ ನೆರವೇರಿತು.

ನೂತನ ಕಚೇರಿಯನ್ನು ಪಂಚ ದೀಪವನ್ನು ಬೆಳಗಿಸುವ ಮೂಲಕ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯ, ವಿಧಾನ ಪರಿಷತ್ ಶಾಸಕ ಕೆ ಪ್ರತಾಪ್ ಸಿಂಹ ನಾಯ್ಕ , ಮಾಜಿ ಶಾಸಕ ಕೆ ವಸಂತ ಬಂಗೇರ, ಹಿರಿಯ ವಕೀಲರಾದ ಭಗೀರಥ ಜಿ, ಸುಬ್ರಹ್ಮಣ್ಯ ಸ್ಥಾನಿಕ ಸಭಾದ ಅಧ್ಯಕ್ಷ ರಾಧಕೃಷ್ಣ ರಾವ್ ನೆರವೇರಿಸಿ, ನೂತನ ಸಂಸ್ಥೆಗೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಪ್ರಸಾದ್ ಕೆ ಎಸ್, ಕಾರ್‍ಯದರ್ಶಿ ಶೈಲೇಶ್ ಠೋಸರ್, ಕುಟುಂಬದ ಹಿರಿಯರಾದ ಬಿ.ಕೆ ಸುಬ್ಬರಾವ್, ನ್ಯಾಯವಾದಿಗಳಾದ ಮನೋಹರ ಕುಮಾರ್ ಇಳಂತಿಲ, ಸಂತೋಷ್ ಕುಮಾರ್, ವಿನಯ ಕುಮಾರ್, ನವೀನ್ ಬಿ.ಕೆ, ಶಿವಕುಮಾರ್, ಮೊದಲಾವದರು ಉಪಸ್ಥಿತರಿದ್ದರು.

ಈ ಸಂದರ್ಭ ಯಕ್ಷಗಾನ ಕಲಾವಿದ ಅಪಘಾತದಲ್ಲಿ ಮಲಗಿದ ಸ್ಥಿತಿಯಲ್ಲಿರುವ ವಿಷ್ಣು ಶರ್ಮ ಹಾಗೂ ಉಜಿರೆಯಲ್ಲಿ ರೋಟರಿ ಕ್ಲಬ್ ವತಿಯಿಂದ ಮಹಿಳೆಗೆ ನಿಮಾರ್ಣವಾಗುತ್ತಿರುವ ಮನೆಗೆ ಧನಂಜಯ ರಾವ್ ಅವರು ಧನ ಸಹಾಯವನ್ನು ಹಸ್ತಾಂತರಿಸಿದರು.

ಬೆಳ್ತಂಗಡಿ ರಾವ್ ಅಸೋಸಿಯೇಟ್ಸ್ ನ ವಕೀರುಗಳಾದ ಬಿ.ಕೆ ಮಿಹಿರ್ ರಾವ್, ದಿನೇಶ್ ಶೆಟ್ಟಿ, ಆನಂದ ಕುಮಾರ್ ಎಂ.ಸಿ , ಶ್ರೀಮತಿ ದಕ್ಷಾ ಜೈನ್, ಕು| ರೇಶ್ಮಾ, ಶ್ರೀಮತಿ ಸೌಮ್ಯಲತಾ ಕೆ, ಕು| ಶ್ವೇತಾ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

ರಾವ್ ಅಸೋಸಿಯೇಟ್ಸ್ ನ ಮಾಲಕ ಹಾಗೂ ಪ್ರಖ್ಯಾತ ನ್ಯಾಯವಾದಿ ಧನಂಜಯ್ ರಾವ್ ಮತ್ತು ಅವರ ಪತ್ನಿ ಶ್ರೀಮತಿ ಸೌಮ್ಯಲತಾ ಅತಿಥಿ ಗಣ್ಯರನ್ನು ಸ್ವಾಗತಿಸಿ ಸತ್ಕರಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಕುದುರೆಮುಖ, ನೇತ್ರಾವತಿ ಪೀಕ್ ಚಾರಣಕ್ಕೆ ಆನ್‌ಲೈನ್ ಮೂಲಕ ಬುಕಿಂಗ್

Suddi Udaya

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

2023-24ನೇ ಸಾಲಿನ ಶೈಕ್ಷಣಿಕ ಶಾಲಾ ವೇಳಾಪಟ್ಟಿ ಪ್ರಕಟ ಮೊದಲನೇ ಶೈಕ್ಷಣಿಕ ಅವಧಿ ಮೇ 29 ರಿಂದ ಆರಂಭ

Suddi Udaya

ಮೇ 3 – 4: ನಡ ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂದಿರದ ವಠಾರದಲ್ಲಿ ಲೋಕಕಲ್ಯಾಣಾರ್ಥ “ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ”: ವೈಭಯುತ ಶೋಭಾಯಾತ್ರೆ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!