23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯ ಬಿ.ಕೆ ಧನಂಜಯ ರಾವ್ ರವರ ನೂತನ ಕಚೇರಿ ರಾವ್ ಅಸೋಸಿಯೇಟ್ಸ್ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿಯ ಖ್ಯಾತ ವಕೀಲರಾದ ಬಿ.ಕೆ ಧನಂಜಯ ರಾವ್ ಇವರ ರಾವ್ ಅಸೋಸಿಯೆಟ್ಸ್ ನೂತನ ವಕೀಲರ ಕಚೇರಿಯ ಉದ್ಘಾಟನಾ ಸಮಾರಂಭ ಮೇ 24 ರಂದು ಬೆಳ್ತಂಗಡಿಯ ಮಹಿಳಾ ವೃಂದದ ಕಟ್ಟಡದಲ್ಲಿ ನೆರವೇರಿತು.

ನೂತನ ಕಚೇರಿಯನ್ನು ಪಂಚ ದೀಪವನ್ನು ಬೆಳಗಿಸುವ ಮೂಲಕ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯ, ವಿಧಾನ ಪರಿಷತ್ ಶಾಸಕ ಕೆ ಪ್ರತಾಪ್ ಸಿಂಹ ನಾಯ್ಕ , ಮಾಜಿ ಶಾಸಕ ಕೆ ವಸಂತ ಬಂಗೇರ, ಹಿರಿಯ ವಕೀಲರಾದ ಭಗೀರಥ ಜಿ, ಸುಬ್ರಹ್ಮಣ್ಯ ಸ್ಥಾನಿಕ ಸಭಾದ ಅಧ್ಯಕ್ಷ ರಾಧಕೃಷ್ಣ ರಾವ್ ನೆರವೇರಿಸಿ, ನೂತನ ಸಂಸ್ಥೆಗೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಪ್ರಸಾದ್ ಕೆ ಎಸ್, ಕಾರ್‍ಯದರ್ಶಿ ಶೈಲೇಶ್ ಠೋಸರ್, ಕುಟುಂಬದ ಹಿರಿಯರಾದ ಬಿ.ಕೆ ಸುಬ್ಬರಾವ್, ನ್ಯಾಯವಾದಿಗಳಾದ ಮನೋಹರ ಕುಮಾರ್ ಇಳಂತಿಲ, ಸಂತೋಷ್ ಕುಮಾರ್, ವಿನಯ ಕುಮಾರ್, ನವೀನ್ ಬಿ.ಕೆ, ಶಿವಕುಮಾರ್, ಮೊದಲಾವದರು ಉಪಸ್ಥಿತರಿದ್ದರು.

ಈ ಸಂದರ್ಭ ಯಕ್ಷಗಾನ ಕಲಾವಿದ ಅಪಘಾತದಲ್ಲಿ ಮಲಗಿದ ಸ್ಥಿತಿಯಲ್ಲಿರುವ ವಿಷ್ಣು ಶರ್ಮ ಹಾಗೂ ಉಜಿರೆಯಲ್ಲಿ ರೋಟರಿ ಕ್ಲಬ್ ವತಿಯಿಂದ ಮಹಿಳೆಗೆ ನಿಮಾರ್ಣವಾಗುತ್ತಿರುವ ಮನೆಗೆ ಧನಂಜಯ ರಾವ್ ಅವರು ಧನ ಸಹಾಯವನ್ನು ಹಸ್ತಾಂತರಿಸಿದರು.

ಬೆಳ್ತಂಗಡಿ ರಾವ್ ಅಸೋಸಿಯೇಟ್ಸ್ ನ ವಕೀರುಗಳಾದ ಬಿ.ಕೆ ಮಿಹಿರ್ ರಾವ್, ದಿನೇಶ್ ಶೆಟ್ಟಿ, ಆನಂದ ಕುಮಾರ್ ಎಂ.ಸಿ , ಶ್ರೀಮತಿ ದಕ್ಷಾ ಜೈನ್, ಕು| ರೇಶ್ಮಾ, ಶ್ರೀಮತಿ ಸೌಮ್ಯಲತಾ ಕೆ, ಕು| ಶ್ವೇತಾ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

ರಾವ್ ಅಸೋಸಿಯೇಟ್ಸ್ ನ ಮಾಲಕ ಹಾಗೂ ಪ್ರಖ್ಯಾತ ನ್ಯಾಯವಾದಿ ಧನಂಜಯ್ ರಾವ್ ಮತ್ತು ಅವರ ಪತ್ನಿ ಶ್ರೀಮತಿ ಸೌಮ್ಯಲತಾ ಅತಿಥಿ ಗಣ್ಯರನ್ನು ಸ್ವಾಗತಿಸಿ ಸತ್ಕರಿಸಿದರು.

Related posts

ಇಂದಬೆಟ್ಟುವಿನಲ್ಲಿ ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ

Suddi Udaya

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಕುತೂಹಲ ಕೆರಳಿಸಿದ ಮಾಲಾಡಿ ಗ್ರಾ. ಪಂ. ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜಿದ್ದಾಜಿದ್ದಿನ ಪೈಪೋಟಿ,: ಅಧ್ಯಕ್ಷರಾಗಿ ಪುನೀತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ‍ಸೆಲೆಸ್ಟಿನ್ ಡಿಸೋಜ ಆಯ್ಕೆ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶ್ರೀ ಮೋಹನದಾಸ ಸ್ವಾಮೀಜಿಯರಿಂದ ಧಾರ್ಮಿಕ ಸಂದೇಶ

Suddi Udaya

ಬೆಳ್ತಂಗಡಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya
error: Content is protected !!