25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯ ಬಿ.ಕೆ ಧನಂಜಯ ರಾವ್ ರವರ ನೂತನ ಕಚೇರಿ ರಾವ್ ಅಸೋಸಿಯೇಟ್ಸ್ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿಯ ಖ್ಯಾತ ವಕೀಲರಾದ ಬಿ.ಕೆ ಧನಂಜಯ ರಾವ್ ಇವರ ರಾವ್ ಅಸೋಸಿಯೆಟ್ಸ್ ನೂತನ ವಕೀಲರ ಕಚೇರಿಯ ಉದ್ಘಾಟನಾ ಸಮಾರಂಭ ಮೇ 24 ರಂದು ಬೆಳ್ತಂಗಡಿಯ ಮಹಿಳಾ ವೃಂದದ ಕಟ್ಟಡದಲ್ಲಿ ನೆರವೇರಿತು.

ನೂತನ ಕಚೇರಿಯನ್ನು ಪಂಚ ದೀಪವನ್ನು ಬೆಳಗಿಸುವ ಮೂಲಕ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯ, ವಿಧಾನ ಪರಿಷತ್ ಶಾಸಕ ಕೆ ಪ್ರತಾಪ್ ಸಿಂಹ ನಾಯ್ಕ , ಮಾಜಿ ಶಾಸಕ ಕೆ ವಸಂತ ಬಂಗೇರ, ಹಿರಿಯ ವಕೀಲರಾದ ಭಗೀರಥ ಜಿ, ಸುಬ್ರಹ್ಮಣ್ಯ ಸ್ಥಾನಿಕ ಸಭಾದ ಅಧ್ಯಕ್ಷ ರಾಧಕೃಷ್ಣ ರಾವ್ ನೆರವೇರಿಸಿ, ನೂತನ ಸಂಸ್ಥೆಗೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಪ್ರಸಾದ್ ಕೆ ಎಸ್, ಕಾರ್‍ಯದರ್ಶಿ ಶೈಲೇಶ್ ಠೋಸರ್, ಕುಟುಂಬದ ಹಿರಿಯರಾದ ಬಿ.ಕೆ ಸುಬ್ಬರಾವ್, ನ್ಯಾಯವಾದಿಗಳಾದ ಮನೋಹರ ಕುಮಾರ್ ಇಳಂತಿಲ, ಸಂತೋಷ್ ಕುಮಾರ್, ವಿನಯ ಕುಮಾರ್, ನವೀನ್ ಬಿ.ಕೆ, ಶಿವಕುಮಾರ್, ಮೊದಲಾವದರು ಉಪಸ್ಥಿತರಿದ್ದರು.

ಈ ಸಂದರ್ಭ ಯಕ್ಷಗಾನ ಕಲಾವಿದ ಅಪಘಾತದಲ್ಲಿ ಮಲಗಿದ ಸ್ಥಿತಿಯಲ್ಲಿರುವ ವಿಷ್ಣು ಶರ್ಮ ಹಾಗೂ ಉಜಿರೆಯಲ್ಲಿ ರೋಟರಿ ಕ್ಲಬ್ ವತಿಯಿಂದ ಮಹಿಳೆಗೆ ನಿಮಾರ್ಣವಾಗುತ್ತಿರುವ ಮನೆಗೆ ಧನಂಜಯ ರಾವ್ ಅವರು ಧನ ಸಹಾಯವನ್ನು ಹಸ್ತಾಂತರಿಸಿದರು.

ಬೆಳ್ತಂಗಡಿ ರಾವ್ ಅಸೋಸಿಯೇಟ್ಸ್ ನ ವಕೀರುಗಳಾದ ಬಿ.ಕೆ ಮಿಹಿರ್ ರಾವ್, ದಿನೇಶ್ ಶೆಟ್ಟಿ, ಆನಂದ ಕುಮಾರ್ ಎಂ.ಸಿ , ಶ್ರೀಮತಿ ದಕ್ಷಾ ಜೈನ್, ಕು| ರೇಶ್ಮಾ, ಶ್ರೀಮತಿ ಸೌಮ್ಯಲತಾ ಕೆ, ಕು| ಶ್ವೇತಾ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

ರಾವ್ ಅಸೋಸಿಯೇಟ್ಸ್ ನ ಮಾಲಕ ಹಾಗೂ ಪ್ರಖ್ಯಾತ ನ್ಯಾಯವಾದಿ ಧನಂಜಯ್ ರಾವ್ ಮತ್ತು ಅವರ ಪತ್ನಿ ಶ್ರೀಮತಿ ಸೌಮ್ಯಲತಾ ಅತಿಥಿ ಗಣ್ಯರನ್ನು ಸ್ವಾಗತಿಸಿ ಸತ್ಕರಿಸಿದರು.

Related posts

ಉಜಿರೆ ಮಣಿಕೆಯಲ್ಲಿ ಉಜಿರೆ ಮಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಅಧ್ಯಕ್ಷರುಗಳು ಭಾಗಿ

Suddi Udaya

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆವಾಗಲಿದ್ದ ಲಾಯಿಲದ ದಾಮೋದರ ಗೌಡ ರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

Suddi Udaya

ಮೇ 16 ರಂದು ‘ಲೈಟ್ ಹೌಸ್’ ಮಕ್ಕಳ ಚಲನಚಿತ್ರ ಬಿಡುಗಡೆ: ನಾಯಕ ನಟನಾಗಿ ನಾವೂರಿನ ಅಚಲ್ ಜಿ. ಬಂಗೇರ- ನಾಯಕಿ ನಟಿ ಅಪೂರ್ವ ಮಾಳ

Suddi Udaya

ಮಚ್ಚಿನ: ರುದ್ರಭೂಮಿ ಸಮಿತಿ ಹಾಗೂ ಎಬಿಸಿ ಒಕ್ಕೂಟದಿಂದ ಡಾ.ಡಿ. ಹೆಗ್ಗಡೆಯವರನ್ನು ಭೇಟಿ:

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿಯಿಂದ ಕರ್ನಾಟಕ ರಾಜ್ಯೋತ್ಸವ

Suddi Udaya

ಎಕ್ಸಲೆಂಟ್ ಮೂಡುಬಿದಿರೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಅವರಿಗೆ ರಾಷ್ಟ್ರಮಟ್ಟದ ಪ್ರತಿಷ್ಠಿತ “ಭಾರತ್ ರತ್ನ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಎಜುಕೇಶನ್ ಎಕ್ಸಲೆನ್ಸ್ ಅವಾರ್ಡ್”

Suddi Udaya
error: Content is protected !!