23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯ ಬಿ.ಕೆ ಧನಂಜಯ ರಾವ್ ರವರ ನೂತನ ಕಚೇರಿ ರಾವ್ ಅಸೋಸಿಯೇಟ್ಸ್ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿಯ ಖ್ಯಾತ ವಕೀಲರಾದ ಬಿ.ಕೆ ಧನಂಜಯ ರಾವ್ ಇವರ ರಾವ್ ಅಸೋಸಿಯೆಟ್ಸ್ ನೂತನ ವಕೀಲರ ಕಚೇರಿಯ ಉದ್ಘಾಟನಾ ಸಮಾರಂಭ ಮೇ 24 ರಂದು ಬೆಳ್ತಂಗಡಿಯ ಮಹಿಳಾ ವೃಂದದ ಕಟ್ಟಡದಲ್ಲಿ ನೆರವೇರಿತು.

ನೂತನ ಕಚೇರಿಯನ್ನು ಪಂಚ ದೀಪವನ್ನು ಬೆಳಗಿಸುವ ಮೂಲಕ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯ, ವಿಧಾನ ಪರಿಷತ್ ಶಾಸಕ ಕೆ ಪ್ರತಾಪ್ ಸಿಂಹ ನಾಯ್ಕ , ಮಾಜಿ ಶಾಸಕ ಕೆ ವಸಂತ ಬಂಗೇರ, ಹಿರಿಯ ವಕೀಲರಾದ ಭಗೀರಥ ಜಿ, ಸುಬ್ರಹ್ಮಣ್ಯ ಸ್ಥಾನಿಕ ಸಭಾದ ಅಧ್ಯಕ್ಷ ರಾಧಕೃಷ್ಣ ರಾವ್ ನೆರವೇರಿಸಿ, ನೂತನ ಸಂಸ್ಥೆಗೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಪ್ರಸಾದ್ ಕೆ ಎಸ್, ಕಾರ್‍ಯದರ್ಶಿ ಶೈಲೇಶ್ ಠೋಸರ್, ಕುಟುಂಬದ ಹಿರಿಯರಾದ ಬಿ.ಕೆ ಸುಬ್ಬರಾವ್, ನ್ಯಾಯವಾದಿಗಳಾದ ಮನೋಹರ ಕುಮಾರ್ ಇಳಂತಿಲ, ಸಂತೋಷ್ ಕುಮಾರ್, ವಿನಯ ಕುಮಾರ್, ನವೀನ್ ಬಿ.ಕೆ, ಶಿವಕುಮಾರ್, ಮೊದಲಾವದರು ಉಪಸ್ಥಿತರಿದ್ದರು.

ಈ ಸಂದರ್ಭ ಯಕ್ಷಗಾನ ಕಲಾವಿದ ಅಪಘಾತದಲ್ಲಿ ಮಲಗಿದ ಸ್ಥಿತಿಯಲ್ಲಿರುವ ವಿಷ್ಣು ಶರ್ಮ ಹಾಗೂ ಉಜಿರೆಯಲ್ಲಿ ರೋಟರಿ ಕ್ಲಬ್ ವತಿಯಿಂದ ಮಹಿಳೆಗೆ ನಿಮಾರ್ಣವಾಗುತ್ತಿರುವ ಮನೆಗೆ ಧನಂಜಯ ರಾವ್ ಅವರು ಧನ ಸಹಾಯವನ್ನು ಹಸ್ತಾಂತರಿಸಿದರು.

ಬೆಳ್ತಂಗಡಿ ರಾವ್ ಅಸೋಸಿಯೇಟ್ಸ್ ನ ವಕೀರುಗಳಾದ ಬಿ.ಕೆ ಮಿಹಿರ್ ರಾವ್, ದಿನೇಶ್ ಶೆಟ್ಟಿ, ಆನಂದ ಕುಮಾರ್ ಎಂ.ಸಿ , ಶ್ರೀಮತಿ ದಕ್ಷಾ ಜೈನ್, ಕು| ರೇಶ್ಮಾ, ಶ್ರೀಮತಿ ಸೌಮ್ಯಲತಾ ಕೆ, ಕು| ಶ್ವೇತಾ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

ರಾವ್ ಅಸೋಸಿಯೇಟ್ಸ್ ನ ಮಾಲಕ ಹಾಗೂ ಪ್ರಖ್ಯಾತ ನ್ಯಾಯವಾದಿ ಧನಂಜಯ್ ರಾವ್ ಮತ್ತು ಅವರ ಪತ್ನಿ ಶ್ರೀಮತಿ ಸೌಮ್ಯಲತಾ ಅತಿಥಿ ಗಣ್ಯರನ್ನು ಸ್ವಾಗತಿಸಿ ಸತ್ಕರಿಸಿದರು.

Related posts

ಕೊಕ್ಕಡ: ಸರ್ವಿಸ್ ಸ್ಟೇಷನ್ ಮಾಲಕ ಶಾಂತಪ್ಪ ಗೌಡ ಆತ್ಮಹತ್ಯೆ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ ಮಾನ್ಸೂನ್ ದರ ಕಡಿತ ಮಾರಾಟ,10% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಕಾಶಿಪಟ್ಣ: ಬೈಕ್ ಗಳ ನಡುವೆ ಅಪಘಾತ: ಸವಾರರಿಗೆ ಗಾಯ

Suddi Udaya

ಸೌತಡ್ಕ : ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ರವರ ಪುತ್ರಿಗೆ ಐಟಿ ಕಂಪೆನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟ ರಕ್ಷಿತ್ ಶಿವರಾo

Suddi Udaya

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

Suddi Udaya

ಜೂ.13: ಗುರುವಾಯನಕೆರೆ 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!