ಮಚ್ಚಿನ : ಬಳ್ಳಮಂಜ ಗಣೇಶ್ ಬಾಳಿಗ ನಿಧನ

Suddi Udaya

ಮಚ್ಚಿನ : ಇಲ್ಲಿಯ ಬಳ್ಳಮಂಜ ಗಣೇಶ್ ಬಾಳಿಗ (71ವರ್ಷ ) ರವರು ಇತ್ತೀಚೆಗೆ ನಿಧನರಾದರು.

ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಹಾಗೂ ಜಿಲ್ಲೆಯಲ್ಲಿ ನಡೆಯುತ್ತಿರುವ ಹಲವಾರು ಕೃಷಿ ಉತ್ಸವದಲ್ಲಿ ಪಾಲ್ಗೊಂಡು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮೆಚ್ಚುಗೆ ಪಾತ್ರರಾಗಿದ್ದರು ಇವರು ಬಳ್ಳ ಮಂಜದ ಹಿರಿಯ ಉದ್ಯಮಿಯಾಗಿದ್ದು ಹಲವಾರು ಸಂಘ ಸಂಸ್ಥೆಯಲ್ಲಿ ಸಕ್ರಿಯರಾಗಿದ್ದರು.

ಮೃತರು ಪತ್ನಿ ಸುನಿತಾ ಬಾಳಿಗ, ಪುತ್ರರಾದ ಸುಧೀರ್, ಸುನಿಲ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Leave a Comment

error: Content is protected !!