25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಸವಣಾಲು ಬೈರವಕಲ್ಲು ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವ: ಧಾರ್ಮಿಕ ಸಭೆ

ಸವಣಾಲು: ಇಲ್ಲಿಯ ಬೈರವಕಲ್ಲು ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವವು ಕೇಮೊಟ್ಟುಗುತ್ತು ಪ್ರಭಾಕರ ಮಂಜಿತ್ತಾಯರು ಮತ್ತು ಗುತ್ತಿನ ಬೈಲು ಶ್ರೀ ವಿಷ್ಣುಮೂರ್ತಿ ಮಂಜಿತ್ತಾಯರ ನೇತೃತ್ವದಲ್ಲಿ ಮೇ 24 ರಂದು ನಡೆಯಿತು.


ಇಂದು ಬೆಳಿಗ್ಗೆ ಪುಣ್ಯಾಹವಾಚನೆ ಗಣಪತಿ ಹೋಮ, ಸಪರಿವಾರ ಬೈರವ ಮೂಜಿಲ್ನಾಯ ಪುರುಷರಾಯ ದೈವಗಳ ಪ್ರತಿಷ್ಠಾಪನೆ ಸಾನಿಧ್ಯ ಕಲಶಾಭಿಷೇಕ, ಪರ್ವ ಪ್ರಸನ್ನ ಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ನಂತರ ನಡೆದ ಧಾರ್ಮಿಕ ಸಭೆಯಲ್ಲಿ ಪರಮೇಶ್ವರ ಎಂ.ಕೆ ಜಾಲಾಡೆ ಅಧ್ಯಕ್ಷತೆಯನ್ನು ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಸುರೇಂದ್ರ, ಮಲೆಕುಡಿಯರ ಸಂಘದ ಜಿಲ್ಲಾಧ್ಯಕ್ಷ ಹರೀಶ್ ಎಂ.ಕೆ ಎಳನೀರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವ್ಯವಸ್ಥಾಪನ ಸಮಿತಿಯ ಗೌರವಾಧ್ಯಕ್ಷ ರಾಮಣ್ಣ ಜಾಲಾಡೆಮನೆ, ಅಮಿತಿ ಅಧ್ಯಕ್ಷ ಕೃಷ್ಣಪ್ಪ ಗೌಡ ದೇವಸ, ಪ್ರಧಾನ ಕಾರ್ಯದರ್ಶಿಗಳಾದ ವಸಂತ ಎಂ.ಕೆ ಪೇಲ, ಕೃಷ್ಣಪ್ಪ ಎಂ.ಕೆ ಬಾಡಡ್ಕ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಿನ್ನಯ್ಯ ಎಂ.ಕೆ, ಮೇಲಂತಬೆಟ್ಟು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಹರಿಣಾಕ್ಷಿ, ಮೇಲಂತಬೆಟ್ಟು ಗ್ರಾ.ಪಂ. ಸದಸ್ಯರಾದ ಲೋಕನಾಥ ಶೆಟ್ಟಿ, ಪ್ರಭಾಕರ ಆಚಾರ್ಯ, ಚಂದ್ರಶೇಖರ, ಶ್ರೀಮತಿ ಸುಮಲತಾ, ಶ್ರೀಮತಿ ಜಯಲಕ್ಷ್ಮೀ, ಶ್ರೀಮತಿ ಶಶಿಕಲಾ, ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷರುಗಳು, ಪದಾಧಿಕಾರಿಗಳು, ಸಂಚಾಲಕರು, ಸಹಸಂಚಾಲಕರು, ಸರ್ವಸದಸ್ಯರು ಹಾಗೂ ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.
ರಾತ್ರಿ ಬೈರವ ಮೂಜಿಲ್ನಾಯ ಪುರುಷರಾಯ ದೈವಗಳ ಗಗ್ಗರ ಸೇವೆ ನಡೆಯಲಿದೆ.

Related posts

ಬಂದಾರು: ಸಂಯೋಗ ಆಯುರ್ವೇದಾಲಯ ಶುಭಾರಂಭ

Suddi Udaya

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

Suddi Udaya

ಶಿಶಿಲ: ದಿ. ಧರ್ಣಪ್ಪ ಗೌಡ ರವರ ಸ್ಮರಣಾರ್ಥ ಕೊರಗಪ್ಪ ಗೌಡರಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮೇಲಂತಬೆಟ್ಟು ನಿವಾಸಿ ಮಲ್ಲಿಕ್ ನಿಧನ

Suddi Udaya

ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya
error: Content is protected !!