25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 26200 ಬಡ ವಿದ್ಯಾರ್ಥಿಗಳಿಗೆ ‘ಸುಜ್ಞಾನನಿಧಿ ಶಿಷ್ಯವೇತನ’

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮ ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪ್ರಗತಿಬಂಧು-ಸ್ವ-ಸಹಾಯ ಸಂಘಗಳ ಸದಸ್ಯರ ಮಕ್ಕಳ ವೃತ್ತಿಪರ ಹಾಗೂ ತಾಂತ್ರಿಕ ಶಿಕ್ಷಣಕ್ಕಾಗಿ ‘ಸುಜ್ಞಾನನಿಧಿ ಶಿಷ್ಯವೇತನ’ ಕಾರ್ಯಕ್ರಮದ ಮೂಲಕ ಪ್ರಸ್ತುತ ವರ್ಷ 26200 ವಿದ್ಯಾರ್ಥಿಗಳಿಗೆ ಶಿಷ್ಯವೇತನ ಪಾವತಿಸಲಾಗುತ್ತಿದೆಯೆಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ| ಎಲ್.ಹೆಚ್. ಮಂಜುನಾಥ್‌ರವರು ತಿಳಿಸಿದರು.
ಸಾಮಾನ್ಯ ಶಿಕ್ಷಣಕ್ಕಿಂತ ಹೆಚ್ಚಿನ ಅವಕಾಶಗಳು ಇಂದು ವೃತ್ತಿ ಮತ್ತು ತಾಂತ್ರಿಕ ಶಿಕ್ಷಣಕ್ಕೆ ಇದ್ದು, ಬಡ ಮತ್ತು ಅಸಂಘಟಿತ ವಲಯದ ಜನಸಾಮಾನ್ಯರ ಪ್ರತಿಭಾವಂತ ಮಕ್ಕಳು ಬಡತನ, ಸೂಕ್ತ ಬೆಂಬಲ ಮತ್ತು ಇಂತಹ ಶಿಕ್ಷಣವನ್ನು ನೀಡುವ ಶಿಕ್ಷಣ ಸಂಸ್ಥೆಗಳು ಸ್ಥಳೀಯವಾಗಿ ಲಭ್ಯವಿಲ್ಲದೇ ಇರುವುದರಿಂದ ಈ ಶಿಕ್ಷಣವನ್ನು ಪಡೆಯುವುದೇ ದುಸ್ತರವಾಗಿದೆ. ಈ ಕೊರತೆಯನ್ನು ಗಮನಿಸಿದ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗಾಗಿ’ಸುಜ್ಞಾನನಿಧಿ ಶಿಷ್ಯವೇತನ’ ಕಾರ್ಯಕ್ರಮವನ್ನು ಜಾರಿಗೆ ತಂದರು. ಈ ಕಾರ್ಯಕ್ರಮದಂತೆ ಯೋಜನೆಯ ಸಂಘಗಳ ಬಡ ಸದಸ್ಯರ ಪ್ರತಿಭಾನ್ವಿತ ವಿದ್ಯಾರ್ಥಿಗಳ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸ್‌ಗಳಿಗೆ ಶಿಷ್ಯವೇತನ ನೀಡಲಾಗುತ್ತಿದೆ. ಇದರಂತೆ 3 ವರ್ಷದವರೆಗಿನ ಕೋರ್ಸ್‌ಗಳಿಗಾಗಿ ವಿದ್ಯಾರ್ಥಿಗಳಿಗೆ ಪ್ರತೀ ತಿಂಗಳು ತಲಾ ರೂ. 400/-ರಂತೆ ಹಾಗೂ ಅದರಿಂದ ಮೇಲ್ಪಟ್ಟ 5 ವರ್ಷದವರೆಗಿನ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ತಲಾ ರೂ.1000/- ದಂತೆ ಸಂಬಂಧಿಸಿದ ಕೋರ್ಸ್ ಮುಗಿಯುವವರೆಗೆ ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಶಿಷ್ಯವೇತನ ಪಾವತಿಸಲಾಗುತ್ತಿದೆ.

Related posts

ಬಳಂಜ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆ: ಅಧ್ಯಕ್ಷರಾಗಿ ಚೇತನಾ ಜೈನ್, ಪ್ರ.ಕಾರ್ಯದರ್ಶಿಯಾಗಿ ಯಕ್ಷಿತಾ ದೇವಾಡಿಗ

Suddi Udaya

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya

ಉಜಿರೆ: ಎಸ್‌ಡಿಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ದಿ| ಗಿರಿಜ ಕೋಂಗುಜೆ ಯವರ ಉತ್ತರ ಕ್ರಿಯೆ ಕಾರ್ಯಕ್ರಮ

Suddi Udaya

ಆರಂಬೋಡಿ ಸ್ಫೂರ್ತಿ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಉಜಿರೆ: ರುಡ್ ಸೆಟ್ ಸಮೀಪ ರಸ್ತೆಗೆ ಬಿದ್ದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya
error: Content is protected !!