22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ ವ್ಯಕ್ತಿತ್ವ ವಿಕಸನದ ಕಾರ್ಯಾಗಾರ

ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು (ರಿ.) ವತಿಯಿಂದ ಶ್ರೀ ಧ ಮಂ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ, ಉಜಿರೆ ಶ್ರೀಸಿದ್ಧವನ ಗುರುಕುಲದಲ್ಲಿ ವ್ಯಕ್ತಿತ್ವ ವಿಕಸನದ ಕಾರ್ಯಾಗಾರ ಜರಗಿತು.

ಕಾರ್ಯಾಗಾರವನ್ನು ಉದ್ಘಾಟಿಸಿದ ಉಜಿರೆ ಶ್ರೀಧ ಮಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಎಸ್ ಸತೀಶ್ಚಂದ್ರರವರು ಮಾತನಾಡುತ್ತಾ, ತರಬೇತಿಯ ಮೂಲಕ ಪರಸ್ಪರ ಪರಿಚಯ ಮತ್ತು ವಿಚಾರ ವಿನಿಮಯ ಮಾಡುವುದರೊಂದಿಗೆ ನಮ್ಮನ್ನು ನಾವು ಅರಿತುಕೊಳ್ಳಲು ಸಾಧ್ಯ. ಜೊತೆಗೆ ಮಾನವ ಸಂಪನ್ಮೂಲದ ಬಳಕೆ ಮತ್ತು ವ್ಯಕ್ತಿತ್ವದ ವಿಕಾಸ ಸಾಧ್ಯವಾಗುತ್ತದೆ. ವೃತ್ತಿಶೀಲತೆ ಬೆಳವಣಿಗೆಯಾಗುತ್ತದೆ. ಸಂಸ್ಥೆಯ ಪ್ರತಿಯೊಬ್ಬ ನೌಕರರೂ ಅರಿತುಕೊಂಡು ಕರ್ತವ್ಯ ನಿರ್ವಹಿಸಬೇಕು. ವೃತ್ತಿ ಗೌರವವನ್ನು ಕಾಪಾಡಿಕೊಂಡು ಸ್ವಾಭಿಮಾನಿಯಾಗಿ ಆತ್ಮಾಭಿಮಾನಿಯಾಗಬೇಕು. ಬದಲಾದ ಕಾಲಕ್ಕೆ ಅನುಗುಣವಾಗಿ ಬದಲಾಗಬೇಕು ಎಂದು ಅಭಿಪ್ರಾಯಪಟ್ಟರು.

ಸಮಾರಂಭದ ವೇದಿಕೆಯಲ್ಲಿ ವಿವಿಧ ಶ್ರೀ ಧ ಮಂ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರುಗಳಾದ ಡಾ. ಕುಮಾರ ಹೆಗ್ಡೆ, ಡಾ. ಪ್ರಶಾಂತ್ ಶೆಟ್ಟಿ, ಡಾ. ಪ್ರಮೋದ್ ಕುಮಾರ್, ಸುನಿಲ್ ಪಂಡಿತ್, ಡಾ. ಅಶೋಕ್ ಕುಮಾರ್, ಡಾ. ವಿಶ್ವನಾಥ್, ತರಬೇತುದಾರ ಜೇಸಿ ಸತೀಶ್ ಭಟ್ ಬಿಳಿನೆಲೆಯವರು ಉಪಸ್ಥಿತರಿದ್ದರು.

ಶ್ರೀ ಧ ಮಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಬಿ. ಸೋಮಶೇಖರ ಶೆಟ್ಟಿಯವರು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಕಾರ್ಯಕ್ರಮ ನಿರೂಪಿಸಿದ ಬೆಳಾಲು ಶ್ರೀ ಧ ಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೊಕ್ಕಾಡಿಯರು ಧನ್ಯವಾದ ಸಲ್ಲಿಸಿದರು.

Related posts

ಏ.23: ಹುರುಂಬಿದೊಟ್ಟು ದೇವಾಲಯ ನಿರ್ಮಾಣದ ಶಿಲಾನ್ಯಾಸ-ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ನಡ- ಕನ್ಯಾಡಿ ಗ್ರಾಮಗಳಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಹೆಣ್ಣು ಮಕ್ಕಳಿಗೆ ಅರಿವು ಕಾರ್ಯಕ್ರಮ

Suddi Udaya

ಕೊಲ್ಪಾಡಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಪುನಾರಚನೆ: ಅಧ್ಯಕ್ಷರಾಗಿ ಲೋಕೇಶ್ ಓಣಾಜೆ ಆಯ್ಕೆ‌

Suddi Udaya

ಪುಂಜಾಲಕಟ್ಟೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ: ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಆಯ್ಕೆ

Suddi Udaya
error: Content is protected !!