ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭವು ಮೇ 24 ರಂದು ಮಹಿಳಾ ಗ್ರಾಹಕರ ಸಹಕಾರ ಸಂಘದ ಕಟ್ಟಡದಲ್ಲಿ ನಡೆಯಿತು.

ಶಾಖಾ ಕಛೇರಿ ಉದ್ಘಾಟನೆಯನ್ನು ಸುಮನಾ ಪುಷ್ಪರಾಜ್ ಶೆಟ್ಟಿ ಉಜಿರೆ ನೆರವೇರಿಸಿದರು. ವಂದನಾ ರಾಜು ಶೆಟ್ಟಿ ಬೆಂಗತ್ಯಾರು ದೀಪ ಪ್ರಜ್ವಲಿಸಿದರು. ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಸ್. ಜಯರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಎಂ.ಜಿ. ಶೆಟ್ಟಿ ಭದ್ರತಾ ಕೊಠಡಿ ಉದ್ಘಾಟಿಸಿದರು. ಗಣಕ ಯಂತ್ರದ ಉದ್ಘಾಟನೆಯನ್ನು ವಸುಧಾ ಪ್ರಶಾಂತ್ ಶೆಟ್ಟಿ ಮೂಡಾಯೂರು ಮಡಂತ್ಯಾರು ನೆರವೇರಿಸಿದರು.


ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಬಿ. ಸೀತಾರಾಮ ಶೆಟ್ಟಿ, ಬಾಲಕೃಷ್ಣ ಪೂಂಜಾ ಹೆಚ್, ಜಯಂತ ಶೆಟ್ಟಿ, ಪುಷ್ಪರಾಜ್ ಶೆಟ್ಟಿ, ಬಿ. ನಾರಾಯಣ ಶೆಟ್ಟಿ, ಕೃಷ್ಣ ರೈ ಟಿ., ರಘುರಾಮ ಶೆಟ್ಟಿ ಎ., ಸದಾಶಿವ ಶೆಟ್ಟಿ, ಅಂಬಾ ಬಿ. ಆಳ್ವ, ರಾಜೇಶ್ ಶೆಟ್ಟಿ, ಪುರಂದರ ಶೆಟ್ಟಿ, ಜಯರಾಮ ಭಂಡಾರಿ ಎಂ, ಮಂಜುನಾಥ ರೈ, ಸಾರಿಕಾ ಶೆಟ್ಟಿ, ಪ್ರಭಾರ ಶಾಖಾ ಪ್ರಬಂಧಕಿ ಅಖಿಲಾ ಆರ್. ಶೆಟ್ಟಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Leave a Comment

error: Content is protected !!