23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

ಕೊಕ್ಕಡ : ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ಸಾಮಾನ್ಯ ಸಭೆಯು ಕೊಕ್ಕಡ ಮರಿಯಾಕ್ರಪಾ ಕಚೇರಿಯಲ್ಲಿ ಮೇ. 23 ರಂದು ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ಜಿತೇಶ್ ಎಲ್ ಪಿರೇರಾ ವಹಿಸಿದ್ದರು.

ವಲಯ 15 ವಲಯಾಡಳಿತ ಸಮಿತಿ ಸಭೆಯನ್ನು ಕೊಕ್ಕಡ ಘಟಕದ ಆತಿಥ್ಯದಲ್ಲಿ ಮೇ. 28 ರಂದು ನಡೆಸಲು ನಿರ್ಧರಿಸಲಾಯಿತು.

ಜೂನ್ ತಿಂಗಳಲ್ಲಿ ಬ್ರಹತ್ ರಕ್ತದಾನ ಶಿಬಿರ, ರಕ್ತದಾನಿಗಳಗೆ ಅಭಿನಂದನೆ ನಡೆಸುವುದು. ಜೇಸಿ ಫೌಂಡೇಶನಿಗೆ ಹೆಚ್. ಜಿ.ಎಫ್. ಕೊಡುಗೆಯನ್ನು ನೀಡುವುದು, ಊರಿನ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಣೆ, ಮಧ್ಯಂತರ ಸಮ್ಮೇಳನದಲ್ಲಿ ಭಾಗವಹಿಸುವುದು. ನೂರರಷ್ಟು ಶೇಕಡಾ ಫಲಿತಾಂಶ ಸಾಧಿಸಿದ ಪ್ರೌಢ ಶಾಲೆಗಳಿಗೆ ಅಭಿನಂದನೆ ಸಮರ್ಪಣೆ, ಕ್ಯಾನ್ಸರ್ ಪೀಡಿತ ಬಡ ಮಹಿಳೆಗೆ ಸಹಾಯಧನ ನೀಡಲು ನಿರ್ಧರಿಸಲಾಗಿದೆ.

ನಿಕಟಪೂರ್ವ ಅಧ್ಯಕ್ಷ ಕೆ. ಶ್ರೀಧರ್ ರಾವ್ ಶುಭ ಹಾರೈಸಿದರು. ಯುವ ಜೇಸಿ ಶ್ರವಣ್ ವರದಿ ವಾಚಿಸಿದರು.

ಉಪಾಧ್ಯಕ್ಷರಾದ ಯು.ನರಸಿಂಹ ನಾಯಕ್, ಹರಿಶ್ಚಂದ್ರ ಆಚಾರ್ಯ, ಹಿರಿಯ ಸದಸ್ಯ ಜೋಸೆಫ್ ಪಿರೇರಾ ಸಲಹೆ ಸೂಚನೆಗಳನ್ನು ನೀಡಿದರು. ಕೋಶಾಧಿಕಾರಿ ಜಸ್ವಂತ್ ಪಿರೇರಾ ವಂದಿಸಿದರು.

Related posts

ಅರಸಿನಮಕ್ಕಿ: ಆಟೋ ಚಾಲಕ ಕೊರಗಪ್ಪ ಗೌಡ ನಿಧನ

Suddi Udaya

ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಬಿ. ಸೋಮಶೇಖರ ಶೆಟ್ಟಿ ರವರಿಗೆ ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಪಹಲ್ಗಾಮ್ ಪೈಶಾಚಿಕ ಕೃತ್ಯ ಹೇಯ ಮತ್ತು ಖಂಡನೀಯ : ನಿವೃತ್ತ ಎಸ್ಪಿ ಪೀತಾಂಬರ ಹೆರಾಜೆ

Suddi Udaya

ಆ.24: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ‘ಮ್ಯೂಸಿಯಂ ಆನ್ ವೀಲ್’ ಕಾರ್ಯಾಗಾರ

Suddi Udaya

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya
error: Content is protected !!