March 7, 2026
ಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಶ್ರೀ ಧ. ಮಂ.  ಆಂಗ್ಲ ಮಾಧ್ಯಮ  ಶಾಲೆಯಲ್ಲಿ  ಆಂಗ್ಲಭಾಷಾ ಶಿಕ್ಷಕರ  ಕಾರ್ಯಾಗಾರ

ಧರ್ಮಸ್ಥಳ :ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ  ಶಾಲೆ ಯಲ್ಲಿ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಶಯದಂತೆ ಆಂಗ್ಲಭಾಷಾ ಶಿಕ್ಷಕರ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಈ  ಆಂಗ್ಲಭಾಷಾ ಕಾರ್ಯಾಗಾರದಲ್ಲಿ ವ್ಯಾಕರಣವನ್ನು ಸುಲಭವಾಗಿ ವಿದ್ಯಾರ್ಥಿಗಳಿಗೆ ತಲುಪಿಸುವ ರೀತಿ, ಅದಕ್ಕಾಗಿ ಇರುವ ಸುಲಭ ಉಪಾಯಗಳು ,ಚಟುವಟಿಕೆಗಳು ವ್ಯಾಕರಣದಲ್ಲಿ ಸಾಮಾನ್ಯವಾಗಿ ಮಾಡುವ ಸಣ್ಣ ಪುಟ್ಟ ತಪ್ಪುಗಳು, ಆಂಗ್ಲಭಾಷಾ ಅಕ್ಷರಗಳ ಉಚ್ಚಾರಣೆ, ವ್ಯತ್ಯಾಸ, ಇತ್ಯಾದಿಗಳನ್ನು ಸಂಪನ್ಮೂಲ ವ್ಯಕ್ತಿ ಶಂಕರನಾರಾಯಣ ಕಡಂದಲೆ ನಿವೃತ್ತ ಮುಖ್ಯ ಶಿಕ್ಷಕರು, ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆ, ಕಡಂದಲೆ ಇವರು ಅತ್ಯಂತ ಮಾರ್ಮಿಕವಾಗಿ ನಿರ್ವಹಿಸಿದರು . 

ಕಾರ್ಯಾಗಾರದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗೆ ಒಳಪಟ್ಟ ಆಂಗ್ಲಭಾಷಾ ಶಿಕ್ಷಕರು ಭಾಗವಹಿಸಿದ್ದರು. ಧರ್ಮಸ್ಥಳ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವ ರ ಆಂಗ್ಲ ಮಾಧ್ಯಮ ಶಾಲೆಯ  ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ. ವಿ ಅತಿಥಿ ಅಭ್ಯಾಗತರನ್ನು ಸ್ವಾಗತಿಸಿದರು. ಶಾಲೆಯ ಪ್ರಾರಂಭಕ್ಕೂ ಮುನ್ನ ನಡೆಸಿದಂತಹ ಈ ಕಾರ್ಯಗಾರ ಶಿಕ್ಷಕರುಗಳಲ್ಲಿ ಆಂಗ್ಲ ಭಾಷೆಯ ಕುರಿತಾದ  ಹೊಸ ವಿಚಾರಗಳನ್ನು ಅರಿಯಲು ಸಹಕಾರಿಯಾಯಿತು. 

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ: ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

Suddi Udaya

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸೌಜನ್ಯ ಮಾವ ವಿಠಲ್ ಗೌಡ ಪ್ರಕರಣದ ಆರೋಪಿ; ಸ್ಪೋಟಕ ತಿರುವು ನೀಡಿದ ಹೋರಾಟಗಾರ ಸ್ನೇಹಮಯಿ ಕೃಷ್ಣ

Suddi Udaya

ಸೆ.7-8: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಪದ್ಮುಂಜ: ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿ.ಪಂ. ರಸ್ತೆ ಬದಿ ಅನಧಿಕೃತವಾಗಿ ಹಾಕಿದ್ದ ಬೇಲಿಯನ್ನು ತೆರವುಗೊಳಿಸಿದ ಕಂದಾಯ ಇಲಾಖೆ

Suddi Udaya
error: Content is protected !!