24 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಶ್ರೀ ಧ. ಮಂ.  ಆಂಗ್ಲ ಮಾಧ್ಯಮ  ಶಾಲೆಯಲ್ಲಿ  ಆಂಗ್ಲಭಾಷಾ ಶಿಕ್ಷಕರ  ಕಾರ್ಯಾಗಾರ

ಧರ್ಮಸ್ಥಳ :ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ  ಶಾಲೆ ಯಲ್ಲಿ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಶಯದಂತೆ ಆಂಗ್ಲಭಾಷಾ ಶಿಕ್ಷಕರ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಈ  ಆಂಗ್ಲಭಾಷಾ ಕಾರ್ಯಾಗಾರದಲ್ಲಿ ವ್ಯಾಕರಣವನ್ನು ಸುಲಭವಾಗಿ ವಿದ್ಯಾರ್ಥಿಗಳಿಗೆ ತಲುಪಿಸುವ ರೀತಿ, ಅದಕ್ಕಾಗಿ ಇರುವ ಸುಲಭ ಉಪಾಯಗಳು ,ಚಟುವಟಿಕೆಗಳು ವ್ಯಾಕರಣದಲ್ಲಿ ಸಾಮಾನ್ಯವಾಗಿ ಮಾಡುವ ಸಣ್ಣ ಪುಟ್ಟ ತಪ್ಪುಗಳು, ಆಂಗ್ಲಭಾಷಾ ಅಕ್ಷರಗಳ ಉಚ್ಚಾರಣೆ, ವ್ಯತ್ಯಾಸ, ಇತ್ಯಾದಿಗಳನ್ನು ಸಂಪನ್ಮೂಲ ವ್ಯಕ್ತಿ ಶಂಕರನಾರಾಯಣ ಕಡಂದಲೆ ನಿವೃತ್ತ ಮುಖ್ಯ ಶಿಕ್ಷಕರು, ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆ, ಕಡಂದಲೆ ಇವರು ಅತ್ಯಂತ ಮಾರ್ಮಿಕವಾಗಿ ನಿರ್ವಹಿಸಿದರು . 

ಕಾರ್ಯಾಗಾರದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗೆ ಒಳಪಟ್ಟ ಆಂಗ್ಲಭಾಷಾ ಶಿಕ್ಷಕರು ಭಾಗವಹಿಸಿದ್ದರು. ಧರ್ಮಸ್ಥಳ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವ ರ ಆಂಗ್ಲ ಮಾಧ್ಯಮ ಶಾಲೆಯ  ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ. ವಿ ಅತಿಥಿ ಅಭ್ಯಾಗತರನ್ನು ಸ್ವಾಗತಿಸಿದರು. ಶಾಲೆಯ ಪ್ರಾರಂಭಕ್ಕೂ ಮುನ್ನ ನಡೆಸಿದಂತಹ ಈ ಕಾರ್ಯಗಾರ ಶಿಕ್ಷಕರುಗಳಲ್ಲಿ ಆಂಗ್ಲ ಭಾಷೆಯ ಕುರಿತಾದ  ಹೊಸ ವಿಚಾರಗಳನ್ನು ಅರಿಯಲು ಸಹಕಾರಿಯಾಯಿತು. 

Related posts

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷರಾಗಿ ಜನಾರ್ದನ ಗೌಡ ಕೆ, ಉಪಾಧ್ಯಕ್ಷರಾಗಿ ಸಿರಿಲ್ ಪಿಂಟೋ

Suddi Udaya

ಸೌತಡ್ಕ ದೇವಳದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ: ಸಮಾರೋಪ ಸಮಾರಂಭ

Suddi Udaya

ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಲೋಕಸಭೆ ಚುನಾವಣೆ ಹಿನ್ನಲೆ: ಬೆಳ್ತಂಗಡಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕ‌ರ್ ಮತ್ತು ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೆ. ವರ್ಗಾವಣೆ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಮಾಜಿ ಶಾಸಕರು ದಿ. ವಸಂತ ಬಂಗೇರರ ಪುತ್ಥಳಿ ಸ್ಥಾಪನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya
error: Content is protected !!