22.6 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಶ್ರೀ ಧ. ಮಂ.  ಆಂಗ್ಲ ಮಾಧ್ಯಮ  ಶಾಲೆಯಲ್ಲಿ  ಆಂಗ್ಲಭಾಷಾ ಶಿಕ್ಷಕರ  ಕಾರ್ಯಾಗಾರ

ಧರ್ಮಸ್ಥಳ :ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ  ಶಾಲೆ ಯಲ್ಲಿ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಶಯದಂತೆ ಆಂಗ್ಲಭಾಷಾ ಶಿಕ್ಷಕರ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಈ  ಆಂಗ್ಲಭಾಷಾ ಕಾರ್ಯಾಗಾರದಲ್ಲಿ ವ್ಯಾಕರಣವನ್ನು ಸುಲಭವಾಗಿ ವಿದ್ಯಾರ್ಥಿಗಳಿಗೆ ತಲುಪಿಸುವ ರೀತಿ, ಅದಕ್ಕಾಗಿ ಇರುವ ಸುಲಭ ಉಪಾಯಗಳು ,ಚಟುವಟಿಕೆಗಳು ವ್ಯಾಕರಣದಲ್ಲಿ ಸಾಮಾನ್ಯವಾಗಿ ಮಾಡುವ ಸಣ್ಣ ಪುಟ್ಟ ತಪ್ಪುಗಳು, ಆಂಗ್ಲಭಾಷಾ ಅಕ್ಷರಗಳ ಉಚ್ಚಾರಣೆ, ವ್ಯತ್ಯಾಸ, ಇತ್ಯಾದಿಗಳನ್ನು ಸಂಪನ್ಮೂಲ ವ್ಯಕ್ತಿ ಶಂಕರನಾರಾಯಣ ಕಡಂದಲೆ ನಿವೃತ್ತ ಮುಖ್ಯ ಶಿಕ್ಷಕರು, ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆ, ಕಡಂದಲೆ ಇವರು ಅತ್ಯಂತ ಮಾರ್ಮಿಕವಾಗಿ ನಿರ್ವಹಿಸಿದರು . 

ಕಾರ್ಯಾಗಾರದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗೆ ಒಳಪಟ್ಟ ಆಂಗ್ಲಭಾಷಾ ಶಿಕ್ಷಕರು ಭಾಗವಹಿಸಿದ್ದರು. ಧರ್ಮಸ್ಥಳ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವ ರ ಆಂಗ್ಲ ಮಾಧ್ಯಮ ಶಾಲೆಯ  ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ. ವಿ ಅತಿಥಿ ಅಭ್ಯಾಗತರನ್ನು ಸ್ವಾಗತಿಸಿದರು. ಶಾಲೆಯ ಪ್ರಾರಂಭಕ್ಕೂ ಮುನ್ನ ನಡೆಸಿದಂತಹ ಈ ಕಾರ್ಯಗಾರ ಶಿಕ್ಷಕರುಗಳಲ್ಲಿ ಆಂಗ್ಲ ಭಾಷೆಯ ಕುರಿತಾದ  ಹೊಸ ವಿಚಾರಗಳನ್ನು ಅರಿಯಲು ಸಹಕಾರಿಯಾಯಿತು. 

Related posts

ಕೊಲ್ಕತ್ತಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲಾದ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

Suddi Udaya

ಕೊಯ್ಯೂರು ಹಿಂದೂ ರುದ್ರ ಭೂಮಿಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಯಶವಂತ ಗೌಡ ಪೂರ್ಯಾಳ ಆಯ್ಕೆ

Suddi Udaya

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya

ಮದ್ದಡ್ಕ: ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಪಲ್ಟಿ

Suddi Udaya

ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಕಾಶಿಪಟ್ಣ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮ ಘೋಷಣೆ

Suddi Udaya
error: Content is protected !!