25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕ್ರಿಕೆಟ್ ಪಂದ್ಯಾಟದ ಮೂಲಕ ಸಹಾಯನಿಧಿ ಸಂಗ್ರಹಿಸಿದ ಮಾರ್ನಿಂಗ್ ಫ್ರೆಂಡ್ಸ್ ಅನಾರೋಗ್ಯದಿಂದ ಬಳಲುತ್ತಿದ್ದ ಕೀರ್ತನ್ ಚಿಕಿತ್ಸೆಗೆ ರೂ.2.25 ಲಕ್ಷ ಹಸ್ತಾಂತರ

ಅಳದಂಗಡಿ: ಇಂದು ಸಮಾಜದಲ್ಲಿ ಸಂಘಟನೆಗಳು ಮಾನವೀಯ ಸೇವೆಯ ಚಟುವಟಿಕೆಗಳನ್ನು ನಡೆಸುವುದರ ಮೂಲಕ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿವೆ.

ಆರೋಗ್ಯ ಶಿಬಿರ, ಬಡ ಕುಟುಂಬದ ಮಕ್ಕಳಿಗೆ ಪುಸ್ತಕ ವಿತರಣೆ ಸೇರಿದಂತೆ ಆನೇಕ ಯೋಜನೆಗಳನ್ನು ನಡೆಸುತ್ತಿವೆ. ಆದರೆ ಇಲ್ಲೊಂದು ಸಂಘಟನೆ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡು ಸಮಾಜದ ಪ್ರಶಂಸೆಗೆ ಪಾತ್ರವಾಗಿ, ಎಲ್ಲರಿಗೂ ಮಾದರಿಯಾಗಿದೆ.

ಅಳದಂಗಡಿ ಮಾರ್ನಿಂಗ್ ಫ್ರೆಂಡ್ಸ್ ಕೆದ್ದು, ತಮ್ಮ ಸೇವಾ ಮನೋಭಾವನೆಯೊಂದಿಗೆ ಸಹಾಯನಿಧಿಗಾಗಿ ಕ್ರಿಕೆಟ್ ಪಂದ್ಯಾಟವನ್ನು ಸಂಘಟಿಸಿತ್ತು. ಇದರ ಮೂಲಕ ಸಂಗ್ರಹವಾದ ಮೊತ್ತ ರೂ. 2.25 ಲಕ್ಷವನ್ನು ಕೀರ್ತನ ಎಂಬ ಯುವಕನ ವೈದ್ಯಕೀಯ ಚಿಕಿತ್ಸೆಗೆ ನೀಡುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಇವರ ಈ ಸೇವಾ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಳದಂಗಡಿ ಅರಮನೆಯ ತಿಮ್ಮಣ್ಣ ಅರಸರಾದ ಡಾ. ಪದ್ಮಪ್ರಸಾದ್ ಅಜಿಲರ ಉಪಸ್ಥಿತಿಯಲ್ಲಿ ಮಾರ್ನಿಂಗ್ ಫ್ರೆಂಡ್ಸ್ ಮತ್ತು ಹಿಂದು ಯುವಶಕ್ತಿ ಅಲಡ್ಕ ಕ್ಷೇತ್ರ ಸದಸ್ಯರ ಸಮ್ಮುಖದಲ್ಲಿ ಈ ನೆರವನ್ನು ಹಸ್ತಾಂತರಿಸಲಾಯಿತು.

Related posts

ಸಾಧನೆಯ ಶಿಖರದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಶಿಕ್ಷಣ ಕ್ಷೇತ್ರದಲ್ಲೇ ಹೊಸ ಭಾಷ್ಯ , ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಸಂಸ್ಥೆ

Suddi Udaya

ಶ್ರೀಕರ ಭಟ್ ಮತ್ತು ಡಾ. ಪಾದೆಕಲ್ಲು ವಿಷ್ಣು ಭಟ್ ರವರಿಗೆ  ಉಡುಪಿಯ ಯಕ್ಷಗಾನ ಕಲಾರಂಗ ಪ್ರಶಸ್ತಿ

Suddi Udaya

ಉಜಿರೆ ರಬ್ಬರ್ ಸೊಸೈಟಿ : ರೂ.17.98 ಲಕ್ಷ ನಿವ್ವಳ ಲಾಭ-ಸದಸ್ಯರಿಗೆ ಶೇ.7 ಡಿವಿಡೆಂಟ್ : ರೂ.5ಸಾವಿರ ಮಿತಿಗೊಳಪಟ್ಟ ಖರೀದಿಗೆ ಬೋನಸ್

Suddi Udaya

ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಷರೋತ್ಸವ: ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ಉಜಿರೆ: ಹೆಗ್ಗಡೆಯವರ ಜೀವನ, ಸಾಧನೆ ಯುವಜನತೆಗೆ ಮಾದರಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!