23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕ್ರಿಕೆಟ್ ಪಂದ್ಯಾಟದ ಮೂಲಕ ಸಹಾಯನಿಧಿ ಸಂಗ್ರಹಿಸಿದ ಮಾರ್ನಿಂಗ್ ಫ್ರೆಂಡ್ಸ್ ಅನಾರೋಗ್ಯದಿಂದ ಬಳಲುತ್ತಿದ್ದ ಕೀರ್ತನ್ ಚಿಕಿತ್ಸೆಗೆ ರೂ.2.25 ಲಕ್ಷ ಹಸ್ತಾಂತರ

ಅಳದಂಗಡಿ: ಇಂದು ಸಮಾಜದಲ್ಲಿ ಸಂಘಟನೆಗಳು ಮಾನವೀಯ ಸೇವೆಯ ಚಟುವಟಿಕೆಗಳನ್ನು ನಡೆಸುವುದರ ಮೂಲಕ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿವೆ.

ಆರೋಗ್ಯ ಶಿಬಿರ, ಬಡ ಕುಟುಂಬದ ಮಕ್ಕಳಿಗೆ ಪುಸ್ತಕ ವಿತರಣೆ ಸೇರಿದಂತೆ ಆನೇಕ ಯೋಜನೆಗಳನ್ನು ನಡೆಸುತ್ತಿವೆ. ಆದರೆ ಇಲ್ಲೊಂದು ಸಂಘಟನೆ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡು ಸಮಾಜದ ಪ್ರಶಂಸೆಗೆ ಪಾತ್ರವಾಗಿ, ಎಲ್ಲರಿಗೂ ಮಾದರಿಯಾಗಿದೆ.

ಅಳದಂಗಡಿ ಮಾರ್ನಿಂಗ್ ಫ್ರೆಂಡ್ಸ್ ಕೆದ್ದು, ತಮ್ಮ ಸೇವಾ ಮನೋಭಾವನೆಯೊಂದಿಗೆ ಸಹಾಯನಿಧಿಗಾಗಿ ಕ್ರಿಕೆಟ್ ಪಂದ್ಯಾಟವನ್ನು ಸಂಘಟಿಸಿತ್ತು. ಇದರ ಮೂಲಕ ಸಂಗ್ರಹವಾದ ಮೊತ್ತ ರೂ. 2.25 ಲಕ್ಷವನ್ನು ಕೀರ್ತನ ಎಂಬ ಯುವಕನ ವೈದ್ಯಕೀಯ ಚಿಕಿತ್ಸೆಗೆ ನೀಡುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಇವರ ಈ ಸೇವಾ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಳದಂಗಡಿ ಅರಮನೆಯ ತಿಮ್ಮಣ್ಣ ಅರಸರಾದ ಡಾ. ಪದ್ಮಪ್ರಸಾದ್ ಅಜಿಲರ ಉಪಸ್ಥಿತಿಯಲ್ಲಿ ಮಾರ್ನಿಂಗ್ ಫ್ರೆಂಡ್ಸ್ ಮತ್ತು ಹಿಂದು ಯುವಶಕ್ತಿ ಅಲಡ್ಕ ಕ್ಷೇತ್ರ ಸದಸ್ಯರ ಸಮ್ಮುಖದಲ್ಲಿ ಈ ನೆರವನ್ನು ಹಸ್ತಾಂತರಿಸಲಾಯಿತು.

Related posts

ಪದ್ಮುಂಜ ಸರಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಅವಕಾಶ ವಂಚನೆಯ ಆರೋಪ : ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ

Suddi Udaya

ಕಾಜಿಮುಗೇರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತರಾಮ ಹೆಬ್ಬಾರ್ ವಿಧಿವಶ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಉಗ್ರಾಣ ಉದ್ಘಾಟನೆ

Suddi Udaya

ಕೊಕ್ಕಡ ಜೆಸಿ ಸಾಮಾನ್ಯ ಸಭೆ: ವಾರ್ಷಿಕ ಕ್ರಿಯಾಯೋಜನೆ ಮಂಜೂರಾತಿ

Suddi Udaya

ಸೇಕ್ರೆಡ್ ಹಾರ್ಟ್ ಚರ್ಚ್ ನ ನೂತನ ಪ್ರಧಾನ ಧರ್ಮ ಗುರು ವಂದನೀಯ ಸ್ಟ್ಯಾನಿ ಗೋವಿಯಸ್ ರಿಗೆ ಮಡಂತ್ಯಾರು ನಾಗರಿಕರ ಪರವಾಗಿ ಸ್ವಾಗತ

Suddi Udaya

ಬಾರ್ಯ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸತೀಶ್ ರವರಿಗೆ ಮಾತೃವಿಯೋಗ

Suddi Udaya
error: Content is protected !!