25.7 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ಮೇಲಂತಬೆಟ್ಟು ಶ್ರೀ ದೇವಿಭಗವತಿ ಅಮ್ಮನವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ : ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ

ಮೇಲಂತಬೆಟ್ಟು: ಎ.3ರಿಂದ ಎ.7ರವರೆಗೆ ಅಷ್ಟಬಂದ ಬ್ರಹ್ಮಕಲಶೋತ್ಸವ ನಡೆದ ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಶ್ರೀ ದೇವಿ ಭಗವತಿ ಅಮ್ಮವರಿಗೆ ದೃಢಕಲಶಾಭಿಷೇಕವು ಮೇ 25 ರಂದು ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಜರುಗಿತು.


ದೇವಸ್ಥಾನದ ಪುನರ್‌ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವವು ಕಳೆದ ಎ.3ರಿಂದ ಎ.7ರವರೆಗೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇದಮೂರ್ತಿ ಶ್ರೀಪಾದ ಪಾಂಗಣ್ಣಾಯರ ನೇತೃತ್ವದಲ್ಲಿ ಊರ ಹಾಗೂ ಪರವೂರ ಭಕ್ತಾಧಿಗಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ಮತ್ತು ಗರುವಾಯನಕೆರೆ ವಲಯ

ಇವರ ಸಹಕಾರದಲ್ಲಿ ವೈಭವ ಪೂರ್ಣವಾಗಿ ಜರುಗಿತ್ತು.
ಇದೀಗ ನಲ್ವತ್ತೆಂಟು ದಿನಗಳು ಕಳೆದಿದ್ದು, ದೃಢಕಲಶದ ಅಂಗವಾಗಿ ಪೂರ್ವಾಹ್ನ ೮ಕ್ಕೆ ಗಣಹೋಮ, 10ಕ್ಕೆ ದೃಢಕಲಶಾಭಿಷೇಕ ಮಧ್ಯಾಹ್ನ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ಜರುಗಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾ.ಡಿ.

ವೀರೇಂದ್ರ ಹೆಗ್ಗಡೆಯವರು ಕ್ಷೇತ್ರಕ್ಕೆ ಭೇಟಿ ನೀಡಿ, ಶ್ರೀ ದೇವಿಭಗವತಿ ಅಮ್ಮನವರ ದರ್ಶನ ಪಡೆದರು. ಕ್ಷೇತ್ರಕ್ಕೆ ಆಗಮಿಸಿದ ಡಾ. ಹೆಗ್ಗಡೆಯವರನ್ನು ಪೂರ್ಣಕುಂಭದೊಂದಿಗೆ ಕ್ಷೇತ್ರದ ಆಡಳಿತ ಮೋಕ್ತೇಸರ ಯೋಗೀಶ್ ಪೂಜಾರಿ ಇವರ ನೇತೃತ್ವದಲ್ಲಿ

ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ, ಪೂಜಾ ಮತ್ತು ಭಜನಾ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಬಂಧು ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರದಲ್ಲಿ ನವರಾತ್ರಿ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕುಣಿತ ಭಜನೆಯ ತರಬೇತಿ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

Suddi Udaya

ಅಂಡಿOಜೆ … ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ

Suddi Udaya
error: Content is protected !!