ಅಸೌಖ್ಯದಿಂದ ಬಳಲಿ ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ನ.ಪಂ ಉಪಾಧ್ಯಕ್ಷ ಮತ್ತಿತರರು

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಭಾರತ ಟಾಕೀಸ್ ಬಳಿ ಅನಾರೋಗ್ಯದಿಂದ ಬಳಲಿ ಅಸ್ವಸ್ಥಗೊಂಡು ಅನಾಥವಾಗಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ನ.ಪಂ ಉಪಾಧ್ಯಕ್ಷ ಹಾಗೂ ಇತರರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

ಭಾರತ್ ಟಾಕೀಸ್ ಬಳಿ ಅಪರಿಚಿತ ವ್ಯಕ್ತಿ ಅನಾರೋಗ್ಯದಿಂದ ಬಳಲಿ ನಡೆಯಲು ಸಾಧ್ಯವಾಗದೆ ಬಿದ್ದಿದ್ದು, ಇದನ್ನು ಕಂಡ ನಗರ ಪಂಚಾಯತಿ ಉಪಾಧ್ಯಕ್ಷ ಜಯಾನಂದ ಗೌಡ ಸದಸ್ಯರಾದ ಶರತ್ ಕುಮಾರ್ ಶೆಟ್ಟಿ ಸ್ಥಳೀಯರಾದ ಕರುಣಾಕರ ಸಂಕೇಶ್ ಶೆಟ್ಟಿ. ಜಗನ್ನಾಥ್ ಹಾಗೂ ಸುರೇಶ್ ಪೌರ ಕಾರ್ಮಿಕರು ಸೇರಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದರು. ಆಸ್ಪತ್ರೆಯ ವೈದ್ಯರು ಹಾಗೂ ಸಿಬಂದಿಗಳು ಆ ವ್ಯಕ್ತಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಅಸೌಖ್ಯದಿಂದ ಬಳಲುತ್ತಿದ್ದ ಈ ವ್ಯಕ್ತಿಯ ಬಗ್ಗೆ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

Leave a Comment

error: Content is protected !!