24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಸೌಖ್ಯದಿಂದ ಬಳಲಿ ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ನ.ಪಂ ಉಪಾಧ್ಯಕ್ಷ ಮತ್ತಿತರರು

ಬೆಳ್ತಂಗಡಿ: ಬೆಳ್ತಂಗಡಿ ಭಾರತ ಟಾಕೀಸ್ ಬಳಿ ಅನಾರೋಗ್ಯದಿಂದ ಬಳಲಿ ಅಸ್ವಸ್ಥಗೊಂಡು ಅನಾಥವಾಗಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ನ.ಪಂ ಉಪಾಧ್ಯಕ್ಷ ಹಾಗೂ ಇತರರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

ಭಾರತ್ ಟಾಕೀಸ್ ಬಳಿ ಅಪರಿಚಿತ ವ್ಯಕ್ತಿ ಅನಾರೋಗ್ಯದಿಂದ ಬಳಲಿ ನಡೆಯಲು ಸಾಧ್ಯವಾಗದೆ ಬಿದ್ದಿದ್ದು, ಇದನ್ನು ಕಂಡ ನಗರ ಪಂಚಾಯತಿ ಉಪಾಧ್ಯಕ್ಷ ಜಯಾನಂದ ಗೌಡ ಸದಸ್ಯರಾದ ಶರತ್ ಕುಮಾರ್ ಶೆಟ್ಟಿ ಸ್ಥಳೀಯರಾದ ಕರುಣಾಕರ ಸಂಕೇಶ್ ಶೆಟ್ಟಿ. ಜಗನ್ನಾಥ್ ಹಾಗೂ ಸುರೇಶ್ ಪೌರ ಕಾರ್ಮಿಕರು ಸೇರಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದರು. ಆಸ್ಪತ್ರೆಯ ವೈದ್ಯರು ಹಾಗೂ ಸಿಬಂದಿಗಳು ಆ ವ್ಯಕ್ತಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಅಸೌಖ್ಯದಿಂದ ಬಳಲುತ್ತಿದ್ದ ಈ ವ್ಯಕ್ತಿಯ ಬಗ್ಗೆ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

Related posts

ಇಂದಬೆಟ್ಟು: ಕಲ್ಲಾಜೆ ನಿವಾಸಿ ಜಾನಕಿ ನಿಧನ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

Suddi Udaya

ನಡ: ಪರಾರಿ ನಿವಾಸಿ ಅರುಣ್ ನಿಧನ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ

Suddi Udaya

ಆ.5: ಪಡಂಗಡಿ ಪಾರ್ಶ್ವಪದ್ಮ ಹಾಗೂ ಮಹಿಳಾ ಮಣಿಗಳ ಆಶ್ರಯದಲ್ಲಿ ‘ಕೆಸರ್ ಡೊಂಜಿ ಗೊಬ್ಬು’

Suddi Udaya

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

Suddi Udaya
error: Content is protected !!