22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕ್ರಿಕೆಟ್ ಪಂದ್ಯಾಟದ ಮೂಲಕ ಸಹಾಯನಿಧಿ ಸಂಗ್ರಹಿಸಿದ ಮಾರ್ನಿಂಗ್ ಫ್ರೆಂಡ್ಸ್ ಅನಾರೋಗ್ಯದಿಂದ ಬಳಲುತ್ತಿದ್ದ ಕೀರ್ತನ್ ಚಿಕಿತ್ಸೆಗೆ ರೂ.2.25 ಲಕ್ಷ ಹಸ್ತಾಂತರ

ಅಳದಂಗಡಿ: ಇಂದು ಸಮಾಜದಲ್ಲಿ ಸಂಘಟನೆಗಳು ಮಾನವೀಯ ಸೇವೆಯ ಚಟುವಟಿಕೆಗಳನ್ನು ನಡೆಸುವುದರ ಮೂಲಕ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿವೆ.

ಆರೋಗ್ಯ ಶಿಬಿರ, ಬಡ ಕುಟುಂಬದ ಮಕ್ಕಳಿಗೆ ಪುಸ್ತಕ ವಿತರಣೆ ಸೇರಿದಂತೆ ಆನೇಕ ಯೋಜನೆಗಳನ್ನು ನಡೆಸುತ್ತಿವೆ. ಆದರೆ ಇಲ್ಲೊಂದು ಸಂಘಟನೆ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡು ಸಮಾಜದ ಪ್ರಶಂಸೆಗೆ ಪಾತ್ರವಾಗಿ, ಎಲ್ಲರಿಗೂ ಮಾದರಿಯಾಗಿದೆ.

ಅಳದಂಗಡಿ ಮಾರ್ನಿಂಗ್ ಫ್ರೆಂಡ್ಸ್ ಕೆದ್ದು, ತಮ್ಮ ಸೇವಾ ಮನೋಭಾವನೆಯೊಂದಿಗೆ ಸಹಾಯನಿಧಿಗಾಗಿ ಕ್ರಿಕೆಟ್ ಪಂದ್ಯಾಟವನ್ನು ಸಂಘಟಿಸಿತ್ತು. ಇದರ ಮೂಲಕ ಸಂಗ್ರಹವಾದ ಮೊತ್ತ ರೂ. 2.25 ಲಕ್ಷವನ್ನು ಕೀರ್ತನ ಎಂಬ ಯುವಕನ ವೈದ್ಯಕೀಯ ಚಿಕಿತ್ಸೆಗೆ ನೀಡುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಇವರ ಈ ಸೇವಾ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಳದಂಗಡಿ ಅರಮನೆಯ ತಿಮ್ಮಣ್ಣ ಅರಸರಾದ ಡಾ. ಪದ್ಮಪ್ರಸಾದ್ ಅಜಿಲರ ಉಪಸ್ಥಿತಿಯಲ್ಲಿ ಮಾರ್ನಿಂಗ್ ಫ್ರೆಂಡ್ಸ್ ಮತ್ತು ಹಿಂದು ಯುವಶಕ್ತಿ ಅಲಡ್ಕ ಕ್ಷೇತ್ರ ಸದಸ್ಯರ ಸಮ್ಮುಖದಲ್ಲಿ ಈ ನೆರವನ್ನು ಹಸ್ತಾಂತರಿಸಲಾಯಿತು.

Related posts

ಕೆ. ವಸಂತ ಬಂಗೇರ ನಿಧನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರವರಿಂದ ಅಂತಿಮ ನಮನ

Suddi Udaya

ಶ್ರೀ ರಾಮ ಕ್ಷೇತ್ರ ಕನ್ಯಾಡಿಯ ಸ್ವಾಮೀಜಿ ಯವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸ್ವಚ್ಛತಾ ಹಿ ಸೇವಾ’ ಸಪ್ತಾಹ ಕಾರ್ಯಕ್ರಮ

Suddi Udaya

ಮಲೆಬೆಟ್ಟು ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ

Suddi Udaya

ವೇಣೂರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಪಿಲಾ ನದಿ ಕಿರು ಸೇತುವೆ ದುರಸ್ತಿ ಸಮಿತಿ ಜಮೆ-ಖರ್ಚುಗಳ ಸಭೆ

Suddi Udaya
error: Content is protected !!