22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

ಉಜಿರೆ: ಉಜಿರೆಯ ಎಸ್. ಡಿ .ಎಂ. ಸ್ನಾತ್ತಕೋತ್ತರ ಕೇಂದ್ರದ ನವೀಕೃತ ಡೀನ್ ಚೇಂಬರನ್ನು ಎಸ್. ಡಿ.ಎಮ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ . ಹರ್ಷೇಂದ್ರ ಕುಮಾರ್ ಉದ್ಘಾಟಿಸಿದರು.

ಕಳೆದ ಎರಡು ತಿಂಗಳುಗಳಿಂದ ಡೀನ್ ಚೇಂಬರಿಗೆ ಹೊಸ ಕಾಯಕಲ್ಪ ನೀಡುವ ಕಾಮಗಾರಿ ಚಾಲ್ತಿಯಲ್ಲಿತ್ತು
.ಕಾಮಗಾರಿ ಪೂರ್ಣಗೊಂಡು ಸುಸಜ್ಜಿತ ವಿನ್ಯಾಸದೊಂದಿಗೆ ಮರುರೂಪುಗೊಂಡ ಡೀನ್ ಚೇಂಬರ್ ಗೆ ಡಿ.ಹರ್ಷೇಂದ್ರ ಕುಮಾರ್ ಮೇ 24 ರಂದು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸ್ನಾತ್ತಕೋತ್ತರ ಕೇಂದ್ರದ ಡೀನ್ ಡಾ. ವಿಶ್ವನಾಥ .ಪಿ ಅವರಿಗೆ ಹೂಗುಚ್ಛ ನೀಡಿ ಶುಭ
ಹಾರೈಸಿದರು. ಸ್ನಾತಕೋತ್ತರ ಕೇಂದ್ರದ ಬೆಳವಣಿಗೆಗೆ ಸಂಬಂಧಿಸಿದ ಮಹತ್ವದ ನಿರ್ಣಯಗಳ ನೆಲೆಯಾಗಿ ಡೀನ್
ಚೇಂಬರ್ ಹೆಗ್ಗುರುತು ಮೂಡಿಸಲಿ ಎಂದು ಆಶಿಸಿದರು. ಡೀನ್ ಚೇಂಬರ್ ಕಡೆಗೆ ಸಮಸ್ಯೆಗಳನ್ನು ನಿವೇದಿಸಿ ಕೊಂಡು ಬರುವವರಿಗೆ ಪರಿಹಾರ ಸಿಗಲಿ, ಈ ಮೂಲಕ ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಕೊಡುಗೆಗಳನ್ನು ನೀಡಲಿ ಎಂದು ಹೇಳಿದರು.

ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ , ಕಾಲೇಜಿನ ಪ್ರಾಂಶುಪಾಲ ಡಾ. ಕುಮಾರ್
ಹೆಗ್ಡೆ ಬಿ. ಎ ,ಸ್ನಾತ್ತಕೋತ್ತರ ಕೇಂದ್ರದ ಡೀನ್ ಡಾ. ವಿಶ್ವನಾಥ್ ಪಿ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ಭಟ್ ನಿರೂಪಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಕುವೆಟ್ಟು; ವಿಕಲಚೇತನರ ಸಮನ್ವಯ ಗ್ರಾಮಸಭೆ : ವಿಕಲಚೇತನರಿಗೆ ರೂ.2.15 ಲಕ್ಷ ನೆರವಿನ ಚೆಕ್ ವಿತರಣೆ

Suddi Udaya

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಸೈನಿಕನ ಮಾತು- ಉಪನ್ಯಾಸ ಕಾರ್ಯಕ್ರಮ

Suddi Udaya

ಪಿಲಿಗೂಡು ಫ್ರೆಂಡ್ಸ್ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾಗಿ ಸೀತಾರಾಮ, ಕಾರ್ಯದರ್ಶಿಯಾಗಿ ದಿನೇಶ್ ಆಯ್ಕೆ

Suddi Udaya
error: Content is protected !!