24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

ಉಜಿರೆ: ಉಜಿರೆಯ ಎಸ್. ಡಿ .ಎಂ. ಸ್ನಾತ್ತಕೋತ್ತರ ಕೇಂದ್ರದ ನವೀಕೃತ ಡೀನ್ ಚೇಂಬರನ್ನು ಎಸ್. ಡಿ.ಎಮ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ . ಹರ್ಷೇಂದ್ರ ಕುಮಾರ್ ಉದ್ಘಾಟಿಸಿದರು.

ಕಳೆದ ಎರಡು ತಿಂಗಳುಗಳಿಂದ ಡೀನ್ ಚೇಂಬರಿಗೆ ಹೊಸ ಕಾಯಕಲ್ಪ ನೀಡುವ ಕಾಮಗಾರಿ ಚಾಲ್ತಿಯಲ್ಲಿತ್ತು
.ಕಾಮಗಾರಿ ಪೂರ್ಣಗೊಂಡು ಸುಸಜ್ಜಿತ ವಿನ್ಯಾಸದೊಂದಿಗೆ ಮರುರೂಪುಗೊಂಡ ಡೀನ್ ಚೇಂಬರ್ ಗೆ ಡಿ.ಹರ್ಷೇಂದ್ರ ಕುಮಾರ್ ಮೇ 24 ರಂದು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸ್ನಾತ್ತಕೋತ್ತರ ಕೇಂದ್ರದ ಡೀನ್ ಡಾ. ವಿಶ್ವನಾಥ .ಪಿ ಅವರಿಗೆ ಹೂಗುಚ್ಛ ನೀಡಿ ಶುಭ
ಹಾರೈಸಿದರು. ಸ್ನಾತಕೋತ್ತರ ಕೇಂದ್ರದ ಬೆಳವಣಿಗೆಗೆ ಸಂಬಂಧಿಸಿದ ಮಹತ್ವದ ನಿರ್ಣಯಗಳ ನೆಲೆಯಾಗಿ ಡೀನ್
ಚೇಂಬರ್ ಹೆಗ್ಗುರುತು ಮೂಡಿಸಲಿ ಎಂದು ಆಶಿಸಿದರು. ಡೀನ್ ಚೇಂಬರ್ ಕಡೆಗೆ ಸಮಸ್ಯೆಗಳನ್ನು ನಿವೇದಿಸಿ ಕೊಂಡು ಬರುವವರಿಗೆ ಪರಿಹಾರ ಸಿಗಲಿ, ಈ ಮೂಲಕ ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಕೊಡುಗೆಗಳನ್ನು ನೀಡಲಿ ಎಂದು ಹೇಳಿದರು.

ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ , ಕಾಲೇಜಿನ ಪ್ರಾಂಶುಪಾಲ ಡಾ. ಕುಮಾರ್
ಹೆಗ್ಡೆ ಬಿ. ಎ ,ಸ್ನಾತ್ತಕೋತ್ತರ ಕೇಂದ್ರದ ಡೀನ್ ಡಾ. ವಿಶ್ವನಾಥ್ ಪಿ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ಭಟ್ ನಿರೂಪಿಸಿದರು.

Related posts

ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya

ಕ್ರೀಡಾಕೂಟ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ರಾಜ್ಯಮಟ್ಟದ ನೆಟ್ ಬಾಲ್ ಕ್ರೀಡೆ: ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಗೆ ಚಿನ್ನದ ಪದಕ

Suddi Udaya

ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ವತಿಯಿಂದ ಖಂಡನೆ

Suddi Udaya

ಬಂದಾರು: ಸಂಯೋಗ ಆಯುರ್ವೇದಾಲಯ ಶುಭಾರಂಭ

Suddi Udaya
error: Content is protected !!