23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

ಉಜಿರೆ: ಉಜಿರೆಯ ಎಸ್. ಡಿ .ಎಂ. ಸ್ನಾತ್ತಕೋತ್ತರ ಕೇಂದ್ರದ ನವೀಕೃತ ಡೀನ್ ಚೇಂಬರನ್ನು ಎಸ್. ಡಿ.ಎಮ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ . ಹರ್ಷೇಂದ್ರ ಕುಮಾರ್ ಉದ್ಘಾಟಿಸಿದರು.

ಕಳೆದ ಎರಡು ತಿಂಗಳುಗಳಿಂದ ಡೀನ್ ಚೇಂಬರಿಗೆ ಹೊಸ ಕಾಯಕಲ್ಪ ನೀಡುವ ಕಾಮಗಾರಿ ಚಾಲ್ತಿಯಲ್ಲಿತ್ತು
.ಕಾಮಗಾರಿ ಪೂರ್ಣಗೊಂಡು ಸುಸಜ್ಜಿತ ವಿನ್ಯಾಸದೊಂದಿಗೆ ಮರುರೂಪುಗೊಂಡ ಡೀನ್ ಚೇಂಬರ್ ಗೆ ಡಿ.ಹರ್ಷೇಂದ್ರ ಕುಮಾರ್ ಮೇ 24 ರಂದು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸ್ನಾತ್ತಕೋತ್ತರ ಕೇಂದ್ರದ ಡೀನ್ ಡಾ. ವಿಶ್ವನಾಥ .ಪಿ ಅವರಿಗೆ ಹೂಗುಚ್ಛ ನೀಡಿ ಶುಭ
ಹಾರೈಸಿದರು. ಸ್ನಾತಕೋತ್ತರ ಕೇಂದ್ರದ ಬೆಳವಣಿಗೆಗೆ ಸಂಬಂಧಿಸಿದ ಮಹತ್ವದ ನಿರ್ಣಯಗಳ ನೆಲೆಯಾಗಿ ಡೀನ್
ಚೇಂಬರ್ ಹೆಗ್ಗುರುತು ಮೂಡಿಸಲಿ ಎಂದು ಆಶಿಸಿದರು. ಡೀನ್ ಚೇಂಬರ್ ಕಡೆಗೆ ಸಮಸ್ಯೆಗಳನ್ನು ನಿವೇದಿಸಿ ಕೊಂಡು ಬರುವವರಿಗೆ ಪರಿಹಾರ ಸಿಗಲಿ, ಈ ಮೂಲಕ ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಕೊಡುಗೆಗಳನ್ನು ನೀಡಲಿ ಎಂದು ಹೇಳಿದರು.

ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ , ಕಾಲೇಜಿನ ಪ್ರಾಂಶುಪಾಲ ಡಾ. ಕುಮಾರ್
ಹೆಗ್ಡೆ ಬಿ. ಎ ,ಸ್ನಾತ್ತಕೋತ್ತರ ಕೇಂದ್ರದ ಡೀನ್ ಡಾ. ವಿಶ್ವನಾಥ್ ಪಿ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ಭಟ್ ನಿರೂಪಿಸಿದರು.

Related posts

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಿಬಾಜೆ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ಭಜನೋತ್ಸವ: ಶೌರ್ಯ ವಿಪತ್ತು ತಂಡದಿಂದ ಶ್ರಮದಾನ

Suddi Udaya

ಶ್ರೀರಾಮ ಪ್ರೌಢ ಶಾಲೆ, ಸುಲ್ಕೇರಿಯ 2024- 25 ಸಾಲಿನ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

Suddi Udaya

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya
error: Content is protected !!