24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ವೆಂಚುರಾ- 2023’ ಸಮಾರೋಪ ಸಮಾರಂಭ

ಉಜಿರೆ ಶ್ರೀ ಧ. ಮಂ ಕಾಲೇಜು ಇಲ್ಲಿನ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಷನ್ ಹಾಗೂ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗಗಳ ಜಂಟಿ ಆಶ್ರಯದಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ವೆಂಚುರಾ 2023’ ಸಮಾರೋಪ ಸಮಾರಂಭ ನಡೆಯಿತು. 

 ಈ ಸಂದರ್ಭ ಎಸ್. ಡಿ. ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾಗಿದ್ದ ದಿವಂಗತ ಡಾ. ಬಿ ಯಶೋವರ್ಮರವರ ಪ್ರಥಮ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ನುಡಿ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿಭಾಗದ ಉಪನ್ಯಾಸಕ ಲೆಫ್ಟಿನೆಂಟ್ ಭಾನುಪ್ರಕಾಶ್ ಮಾತನಾಡಿ ತಂತ್ರಜ್ಞಾನ, ಮಾಹಿತಿ ಮತ್ತು ಆಧುನಿಕತೆಯ ಉಪಯೋಗವನ್ನು ಸಂಸ್ಥೆಯ ಬೆಳವಣಿಗೆಗೆ ಅಳವಡಿಸಿಕೊಂಡ ವೈಖರಿ ಹಾಗೂ ವಿದ್ಯಾರ್ಥಿಗಳ ಮೇಲಿನ ಅವರ ಪ್ರೀತಿಯನ್ನು ನೆನಪಿಸಿಕೊಂಡರು. ಡಾ. ಬಿ ಯಶೋವರ್ಮ ಕುರಿತ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಯಿತು.

ನಂತರ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪಪ್ರಾಂಶುಪಾಲ ಪ್ರೊ. ಶಾಂತಿ ಪ್ರಕಾಶ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಕಲಿಯುವ ವಿಷಯಗಳನ್ನು ಅರ್ಥ ಮಾಡಿಕೊಂಡು ವ್ಯವಹಾರ ನಿರ್ವಹಣೆಯಲ್ಲಿ ವ್ಯವಹಾರ ಮೌಲ್ಯಗಳನ್ನು ಪಾಲಿಸಬೇಕೆಂದು ಕರೆ ನೀಡಿದರು.‌ 

  ಮುಖ್ಯ ಅತಿಥಿಯಾಗಿ ಮುಂಬೈನ ಯುವ ಉದ್ಯಮಿ ಸುರೇಶ್ ಪೂಜಾರಿ ಭಾಗವಹಿಸಿದರು‌.

 ಈ ಸಂದರ್ಭ ಬೇರೆ ಬೇರೆ ಕಾಲೇಜುಗಳಿಂದ ಇಪ್ಪತ್ತು ತಂಡಗಳು ಭಾಗವಹಿಸಿದ್ದು, ಮಾನವ ಸಂಪನ್ಮೂಲ ನಿರ್ವಹಣೆ, ಉತ್ತಮ ನಿರ್ವಹಣೆ, ಹಣಕಾಸು ನಿರ್ವಹಣೆ ಕಾರ್ಯಕ್ರಮ ನಿರ್ವಹಣೆ, ಛಾಯಾಗ್ರಹಣ, ರಸಪ್ರಶ್ನೆ, ಮಾರುಕಟ್ಟೆ ನಿರ್ವಹಣೆ ಸೇರಿದಂತೆ ಏಳು ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. 

 ಪ್ರತಿ ಸ್ಪರ್ಧೆಯಲ್ಲಿಯೂ ಗೆದ್ದ ಎರಡು ತಂಡಗಳಿಗೆ ಹಾಗೂ ಸಮಗ್ರ ಬಹುಮಾನ ಪಡೆದ ಮಂಗಳೂರಿನ ಎಸ್.ಡಿ.ಎಂ ಕಾನೂನು ಮಹಾವಿದ್ಯಾಲಯಕ್ಕೆ ಪ್ರಥಮ ಹಾಗೂ ಎಮ್.ಎ.ಪಿ.ಎಸ್ ಕಾಲೇಜಿಗೆ ದ್ವಿತೀಯ ಬಹುಮಾನಗಳನ್ನು ವಿತರಿಸಲಾಯಿತು.  

ಈ ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ರತ್ನಾವತಿ ಕೆ. ಉಪಸ್ಥಿತರಿದ್ದರು. ವಾಣಿಜ್ಯ ನಿಕಾಯದ ಡೀನ್ ಶಕುಂತಲಾ ಸ್ವಾಗತಿಸಿದರೆ, ಕಾಮರ್ಸ್ ಕ್ಯಾಂಪಸ್ ಅಸೋಸಿಯೇಷನ್ ನ ಕೋಶಾಧಿಕಾರಿ ಪರೀಕ್ಷಿತ್ ಗೋಖಲೆ ವಂದಿಸಿದರು. ವಿಭಾಗದ ವಿದ್ಯಾರ್ಥಿಗಳಾದ ಶ್ರಾವ್ಯ, ಶ್ರವಣ್ ಜೈನ್, ಅಕ್ಷಯ್ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ ಶ್ರೀ ಮಂ. ಅ.ಪ್ರೌ. ಶಾಲೆಯಲ್ಲಿ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಜ್ಞಾನೇಶ್, ಉಪ ನಾಯಕನಾಗಿ ಪ್ರಜ್ವಲ್

Suddi Udaya

ಕೊಕ್ಕಡ ಸ. ಪ್ರೌಢಶಾಲೆಯಲ್ಲಿ ಅ.3 ರಿಂದ ಅ.9 ರವರೆಗೆ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಸಂಬೋಳ್ಯದ ಮೃತ ಬಾಲಕ ಸುಮಂತ್ ಮನೆಗೆ ಸಂಸದ ಬ್ರಿಜೇಶ್ ಚೌಟ ಭೇಟಿ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಲೋಕಸಭಾ ಮಹಾಚುನಾವಣೆ ಹಿನ್ನೆಲೆ: ಕಾಜೂರು ಮಖಾಂ ಶರೀಫ್ ಉರೂಸ್ ಮುಂದಕ್ಕೆ; ಮೇ. 3 – 12 ದಿನಾಂಕ ನಿಗದಿ

Suddi Udaya

ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ : ವಿಜಯೋತ್ಸವ

Suddi Udaya
error: Content is protected !!