23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕ್ರಿಕೆಟ್ ಪಂದ್ಯಾಟದ ಮೂಲಕ ಸಹಾಯನಿಧಿ ಸಂಗ್ರಹಿಸಿದ ಮಾರ್ನಿಂಗ್ ಫ್ರೆಂಡ್ಸ್ ಅನಾರೋಗ್ಯದಿಂದ ಬಳಲುತ್ತಿದ್ದ ಕೀರ್ತನ್ ಚಿಕಿತ್ಸೆಗೆ ರೂ.2.25 ಲಕ್ಷ ಹಸ್ತಾಂತರ

ಅಳದಂಗಡಿ: ಇಂದು ಸಮಾಜದಲ್ಲಿ ಸಂಘಟನೆಗಳು ಮಾನವೀಯ ಸೇವೆಯ ಚಟುವಟಿಕೆಗಳನ್ನು ನಡೆಸುವುದರ ಮೂಲಕ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿವೆ.

ಆರೋಗ್ಯ ಶಿಬಿರ, ಬಡ ಕುಟುಂಬದ ಮಕ್ಕಳಿಗೆ ಪುಸ್ತಕ ವಿತರಣೆ ಸೇರಿದಂತೆ ಆನೇಕ ಯೋಜನೆಗಳನ್ನು ನಡೆಸುತ್ತಿವೆ. ಆದರೆ ಇಲ್ಲೊಂದು ಸಂಘಟನೆ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡು ಸಮಾಜದ ಪ್ರಶಂಸೆಗೆ ಪಾತ್ರವಾಗಿ, ಎಲ್ಲರಿಗೂ ಮಾದರಿಯಾಗಿದೆ.

ಅಳದಂಗಡಿ ಮಾರ್ನಿಂಗ್ ಫ್ರೆಂಡ್ಸ್ ಕೆದ್ದು, ತಮ್ಮ ಸೇವಾ ಮನೋಭಾವನೆಯೊಂದಿಗೆ ಸಹಾಯನಿಧಿಗಾಗಿ ಕ್ರಿಕೆಟ್ ಪಂದ್ಯಾಟವನ್ನು ಸಂಘಟಿಸಿತ್ತು. ಇದರ ಮೂಲಕ ಸಂಗ್ರಹವಾದ ಮೊತ್ತ ರೂ. 2.25 ಲಕ್ಷವನ್ನು ಕೀರ್ತನ ಎಂಬ ಯುವಕನ ವೈದ್ಯಕೀಯ ಚಿಕಿತ್ಸೆಗೆ ನೀಡುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಇವರ ಈ ಸೇವಾ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಳದಂಗಡಿ ಅರಮನೆಯ ತಿಮ್ಮಣ್ಣ ಅರಸರಾದ ಡಾ. ಪದ್ಮಪ್ರಸಾದ್ ಅಜಿಲರ ಉಪಸ್ಥಿತಿಯಲ್ಲಿ ಮಾರ್ನಿಂಗ್ ಫ್ರೆಂಡ್ಸ್ ಮತ್ತು ಹಿಂದು ಯುವಶಕ್ತಿ ಅಲಡ್ಕ ಕ್ಷೇತ್ರ ಸದಸ್ಯರ ಸಮ್ಮುಖದಲ್ಲಿ ಈ ನೆರವನ್ನು ಹಸ್ತಾಂತರಿಸಲಾಯಿತು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ನೆರಿಯ ಸೆಂಟ್ ತೋಮಸ್ ಪ್ರೌಢಶಾಲೆ ಶೇ 100 ರ ಸಾಧನೆಗೆ ಸನ್ಮಾನ

Suddi Udaya

ನೆರಿಯ: ಕಡವೆ ಬೇಟೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಮನ್ಸೂನ್ ಸ್ಪೆಷಲ್ ಆಫರ್

Suddi Udaya
error: Content is protected !!