September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕ್ರಿಕೆಟ್ ಪಂದ್ಯಾಟದ ಮೂಲಕ ಸಹಾಯನಿಧಿ ಸಂಗ್ರಹಿಸಿದ ಮಾರ್ನಿಂಗ್ ಫ್ರೆಂಡ್ಸ್ ಅನಾರೋಗ್ಯದಿಂದ ಬಳಲುತ್ತಿದ್ದ ಕೀರ್ತನ್ ಚಿಕಿತ್ಸೆಗೆ ರೂ.2.25 ಲಕ್ಷ ಹಸ್ತಾಂತರ

ಅಳದಂಗಡಿ: ಇಂದು ಸಮಾಜದಲ್ಲಿ ಸಂಘಟನೆಗಳು ಮಾನವೀಯ ಸೇವೆಯ ಚಟುವಟಿಕೆಗಳನ್ನು ನಡೆಸುವುದರ ಮೂಲಕ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿವೆ.

ಆರೋಗ್ಯ ಶಿಬಿರ, ಬಡ ಕುಟುಂಬದ ಮಕ್ಕಳಿಗೆ ಪುಸ್ತಕ ವಿತರಣೆ ಸೇರಿದಂತೆ ಆನೇಕ ಯೋಜನೆಗಳನ್ನು ನಡೆಸುತ್ತಿವೆ. ಆದರೆ ಇಲ್ಲೊಂದು ಸಂಘಟನೆ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡು ಸಮಾಜದ ಪ್ರಶಂಸೆಗೆ ಪಾತ್ರವಾಗಿ, ಎಲ್ಲರಿಗೂ ಮಾದರಿಯಾಗಿದೆ.

ಅಳದಂಗಡಿ ಮಾರ್ನಿಂಗ್ ಫ್ರೆಂಡ್ಸ್ ಕೆದ್ದು, ತಮ್ಮ ಸೇವಾ ಮನೋಭಾವನೆಯೊಂದಿಗೆ ಸಹಾಯನಿಧಿಗಾಗಿ ಕ್ರಿಕೆಟ್ ಪಂದ್ಯಾಟವನ್ನು ಸಂಘಟಿಸಿತ್ತು. ಇದರ ಮೂಲಕ ಸಂಗ್ರಹವಾದ ಮೊತ್ತ ರೂ. 2.25 ಲಕ್ಷವನ್ನು ಕೀರ್ತನ ಎಂಬ ಯುವಕನ ವೈದ್ಯಕೀಯ ಚಿಕಿತ್ಸೆಗೆ ನೀಡುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಇವರ ಈ ಸೇವಾ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಳದಂಗಡಿ ಅರಮನೆಯ ತಿಮ್ಮಣ್ಣ ಅರಸರಾದ ಡಾ. ಪದ್ಮಪ್ರಸಾದ್ ಅಜಿಲರ ಉಪಸ್ಥಿತಿಯಲ್ಲಿ ಮಾರ್ನಿಂಗ್ ಫ್ರೆಂಡ್ಸ್ ಮತ್ತು ಹಿಂದು ಯುವಶಕ್ತಿ ಅಲಡ್ಕ ಕ್ಷೇತ್ರ ಸದಸ್ಯರ ಸಮ್ಮುಖದಲ್ಲಿ ಈ ನೆರವನ್ನು ಹಸ್ತಾಂತರಿಸಲಾಯಿತು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಗಾಯನ ತರಗತಿ ಆರಂಭ

Suddi Udaya

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya

ನಾಳ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ, ರಾತ್ರಿ ಭಜನೆ, ರಂಗಪೂಜೆ

Suddi Udaya

ಬೆಳ್ತಂಗಡಿಯ ನೂತನ ತಾಲೂಕು ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಕೆ.ವಸಂತ ಬಂಗೇರ ಹೆಸರಿಡಲು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಆಗ್ರಹ

Suddi Udaya

ಮಂಗಳೂರು ಮಾಂಡೋವಿ ಮೋಟಾರ್ಸ್ ಉದ್ಯೋಗಿ, ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಬೈಕ್ ಅಪಘಾತದಲ್ಲಿ ಮೃತ್ಯು

Suddi Udaya

ಕುವೆಟ್ಟು ಅನಧಿಕೃತವಾಗಿ ನಿರ್ಮಿಸುತ್ತಿರುವ ಕಟ್ಟಡ ರಚನೆ ಕಾಮಗಾರಿ ಸ್ಥಗಿತ

Suddi Udaya
error: Content is protected !!