25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಕಾಲೇಜಿನಲ್ಲಿ ಕಲಾನುಸಂಧಾನ ಶಿಬಿರ

ಉಜಿರೆ: ಸಾಹಿತ್ಯದ ವಿವಿಧ ಆಯಾಮಗಳನ್ನು ಪರಿಚಯಿಸುವಂಥ ಶಿಬಿರಗಳು ಯುವಸಮೂಹದಲ್ಲಿ ಸದಭಿರುಚಿ ನೆಲೆಗೊಳಿಸುವುದರೊಂದಿಗೆ ಭಾಷೆ ಮತ್ತು ಸಂಸ್ಕೃತಿಯ ಕುರಿತ ಕಾಳಜಿಯನ್ನು ವ್ಯಾಪಕಗೊಳಿಸುತ್ತವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ.ಹೇಮಾವತಿ ವಿ.ಹೆಗ್ಗಡೆ ಅವರು ಅಭಿಪ್ರಾಯಪಟ್ಟರು.
ಎಸ್.ಡಿ.ಎಂ ಕಾಲೇಜಿನ ಕನ್ನಡ ಸಂಘ ಹಾಗೂ ಹೆಗ್ಗೋಡಿನ ನೀನಾಸಂ ಪ್ರತಿಷ್ಠಾನ ಸಹಯೋಗದೊಂದಿಗೆ 25ನೇ ಸಾಹಿತ್ಯ ಅಧ್ಯಯನ ಶಿಬಿರದ ರಜತ ಸಂಭ್ರಮದ ಪ್ರಯುಕ್ತ ಆಯೋಜಿತವಾದ ಎರಡು ದಿನಗಳ ‘ಕಲಾನುಸಂಧಾನ ಶಿಬಿರ’ವನ್ನು ಮೇ 26 ರಂದು ಉದ್ಘಾಟಿಸಿ ಅವರು ಮಾತನಾಡಿದರು.

ಸಾಹಿತ್ಯ ಎನ್ನುವುದು ನಮ್ಮ ಭಾವನೆಗಳ ಬೆಳವಣಿಗೆಗೆ ಸಾವಯವ ಇದ್ದಹಾಗೆ. ಕಾವ್ಯ, ಕಥೆ, ಕಾದಂಬರಿಗಳ ವಿಮರ್ಶೆಯು ಸರಿಯಾದ ಅರ್ಥಗಳನ್ನು ಹೊಳೆಸುತ್ತದೆ. ನೀನಾಸಂ ಸಂಸ್ಥೆಯೊಂದಿಗೆ ಎಸ್.ಡಿ.ಎಂ ಕಾಲೇಜು ಆಯೋಜಿಸುವ ಶಿಬಿರವು ವಿದ್ಯಾರ್ಥಿಗಳೊಳಗೆ ಸಾಹಿತ್ಯ ಮತ್ತು ಸಂಸ್ಕೃತಿಯ ಪ್ರಜ್ಞೆಯನ್ನು ಮೂಡಿಸಿದೆ. ಈ ಬಗೆಯ ಪ್ರಯತ್ನಗಳು ಮುಂದುವರೆಯಲಿ ಎಂದು ಆಶಿಸಿದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಕಾಲೇಜಿನ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಬದ್ಧತೆಯ ಬಗ್ಗೆ ಪ್ರಸ್ತಾಪಿಸಿದರು. ಕಳೆದ 25 ವರ್ಷಗಳಿಂದ ನೀನಾಸಂ ಸಂಸ್ಥೆಯ ಒಡಂಬಡಿಕೆಯೊಂದಿಗೆ ಎಸ್.ಡಿಂ.ಎಂ ಶಿಕ್ಷಣ ಸಂಸ್ಥೆಯು ಸಾಹಿತ್ಯ, ಸಂಸ್ಕೃತಿ ಕುರಿತು ಮೌಲಿಕ ಚಿಂತನೆಗಳಿಗೆ ವೇದಿಕೆ ಕಲ್ಪಿಸಿಕೊಡುವ ಶಿಬಿರವನ್ನು ನಡೆಸಿಕೊಂಡು ಬಂದಿದೆ ಎಂದರು.
ಎಸ್.ಡಿ.ಎಂ ಕಾಲೇಜಿನ ವಿಶ್ರಾಂತ ಕುಲಸಚಿವರಾದ ಡಾ.ಬಿ.ಪಿ.ಸಂಪತ್ ಕುಮಾರ್ ಅವರು ನೀನಾಸಂ ಸಂಸ್ಥೆಯೊಂದಿಗೆ ಎಸ್.ಡಿ.ಎಂ ಕಾಲೇಜು ಕಳೆದ 24 ವರ್ಷಗಳಿಂದ ಆಯೋಜಿಸುತ್ತಿರುವ ವಾರ್ಷಿಕ ಅಧ್ಯಯನ ಶಿಬಿರದ ಮೌಲಿಕ ಚಿಂತನೆಯ ವಿಶೇಷತೆಗಳನ್ನು ನೆನಪಿಸಿಕೊಂಡರು. ಪ್ರತಿವರ್ಷದ ಶಿಬಿರಗಳ ಮೂಲಕ ಕನ್ನಡದ ಮಹತ್ವದ ಲೇಖಕರ ಕೃತಿಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ಪ್ರಯತ್ನವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಎ.ಕುಮಾರ ಹೆಗ್ಡೆ ವಿದ್ಯಾರ್ಥಿಗಳು ಸಾಹಿತ್ಯ, ಸಂಸ್ಕೃತಿ ಕುರಿತ ಶಿಬಿರಗಳಲ್ಲಿ ಪಾಲ್ಗೊಂಡು ತಮ್ಮ ತಿಳುವಳಿಕೆಯನ್ನು ವಿಸ್ತರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಖ್ಯಾತ ಕಥೆಗಾರರಾದ ವಸುಧೇಂದ್ರ ಉಪಸ್ಥಿತರಿದ್ದರು. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪ್ರೋ.ಟಿ.ಪಿ.ಅಶೋಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಬೋಜಮ್ಮ ಕೆ.ಎನ್. ಸ್ವಾಗತಿಸಿದರು.. ಸಹಾಯಕ ಪ್ರಾಧ್ಯಾಪಕರಾದ ಡಾ.ದಿವಾಕರ ಕೆ ಕಾರ್ಯಕ್ರಮ ನಿರೂಪಿಸಿದರು. ಜಯಶ್ರೀ ವಂದಿಸಿದರು.

Related posts

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಅರಿವು ಕಾರ್ಯಕ್ರಮ

Suddi Udaya

ಕೊಯ್ಯೂರು: ಅಕ್ರಮವಾಗಿ ಮದ್ಯ ಮಾರಾಟ: ಬೆಳ್ತಂಗಡಿ ಪೊಲೀಸರಿಂದ ದಾಳಿ

Suddi Udaya

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

Suddi Udaya

ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಕೊಡಗಿನ ಕುಶಾಲನಗರದಲ್ಲಿ ನಡೆದ ಸಂಪತ್ ಎಂಬವರ ಕೊಲೆ ಪ್ರಕರಣ: ಗುರುವಾಯನಕೆರೆಯ ಶಕ್ತಿನಗರದ ಪಿಜಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ ಕೊಡಗು ಪೊಲೀಸರು

Suddi Udaya
error: Content is protected !!