37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ.ಧ.ಮಂ. ಕಾಲೇಜಿನಲ್ಲಿ ‘ತೆರಿಗೆಯ ಮೂಲಭೂತ ಅಂಶಗಳು’ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ

ಉಜಿರೆ : ಭಾರತದ ತೆರಿಗೆ ಕಾಯ್ದೆ ಬಹಳಷ್ಟು ಉತ್ತಮವಾಗಿದ್ದು, ನಿಯಮಬದ್ಧ ತೆರಿಗೆ ಪಾವತಿಯಿಂದ ಸದೃಢ ಹಾಗೂ ಸಮತೋಲನ ಆರ್ಥಿಕ ಅಭಿವೃದ್ಧಿ ಸಾಧ್ಯವೆಂದು ಬೆಳ್ತಂಗಡಿಯ ಚಾರ್ಟರ್ಡ್ ಅಕೌಂಟೆಂಟ್ ಶ್ರೀಮತಿ ಗಾಯತ್ರಿ ರಾವ್ ತಿಳಿಸಿದರು. ಅವರು ಇತ್ತೀಚೆಗೆ ಶ್ರೀ.ಧ.ಮ ಕಾಲೇಜಿನ ಅರ್ಥಶಾಸ್ತ್ರ ಹಾಗೂ ಗ್ರಾಮೀಣ ಅಭಿವೃದ್ಧಿ ವಿಭಾಗ ಅಯೋಜಿಸಿದ ‘ತೆರಿಗೆಯ ಮೂಲಭೂತ ಅಂಶಗಳು’ ಎಂಬ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತಿದ್ದರು.

 “ಚಾಣಕ್ಯ ನೀತಿಯಲ್ಲಿರುವ ಹಾಗೆ ತೆರಿಗೆ ಎಂದರೆ ಜೇನು ಹೂವಿನಿಂದ ಮಕರಂದವನ್ನು ಹೀರಿ ಹೇಗೆ ಜೇನು ತುಪ್ಪವನ್ನು ಕೊಡುತ್ತದೊ ಅದೇ ರೀತಿ ಸರಕಾರವು ಜನರಿಂದ ತೆರಿಗೆಯನ್ನು ಸಂಗ್ರಹಿಸಿ ಜನರಿಗೆ ಉಪಯೋಗವಾಗುವಂತ ಕೆಲಸಗಳನ್ನು ಮಾಡಬೇಕು” ಎಂದು ಹೇಳಿದರು. 

 ತೆರಿಗೆ ಪಾವತಿಯ ಬಗ್ಗೆ ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ತಿಳಿದುಕೊಂಡು ಸಮಯಕ್ಕೆ ಸರಿಯಾಗಿ ಪಾವತಿಸಿದರೆ ಆರ್ಥಿಕತೆ ಬಲಗೊಳ್ಳುವುದಲ್ಲದೆ ಸಾಮಾಜಿಕ ನ್ಯಾಯವನ್ನು ಕೂಡ ಖಚಿತಪಡಿಸಿಕೊಳ್ಳಲು ಸಾಧ್ಯ ಎಂದು ಅವರು ಹೇಳಿದರು.

ವಿಭಾಗ ವರಿಷ್ಠ ಗಣರಾಜ್ ಕೆ, ಪ್ರಧ್ಯಾಪಕರಾದ ಡಾ.ಮಹೇಶ್ ಕುಮಾರ್ ಶೆಟ್ಟಿ ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅನುಷಾ ಜಿ ಶೆಟ್ಟಿ ಸ್ವಾಗತಿಸಿ, ಪೂರ್ವಿತ ವಂದಿಸಿದರು

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಮಂಗಳೂರು ಸಂಸದ ಬ್ರಿಜೇಶ್ ಚೌಟ ಹಾಗೂ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರ ಅಧ್ಯಕ್ಷ ಚಿತ್ತರಂಜನ್

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಸಮಾರೋಪ ಸಮಾರಂಭ

Suddi Udaya

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯಿಂದ ನಗರ ಸಂಕೀರ್ತನೆ, ರಾಮತಾರಕ ಮಂತ್ರ

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ನೂತನ ವಿಜಯಗೋಪುರ ಲೋಕಾರ್ಪಣೆ

Suddi Udaya
error: Content is protected !!