September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ.ಧ.ಮಂ. ಕಾಲೇಜಿನಲ್ಲಿ ‘ತೆರಿಗೆಯ ಮೂಲಭೂತ ಅಂಶಗಳು’ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ

ಉಜಿರೆ : ಭಾರತದ ತೆರಿಗೆ ಕಾಯ್ದೆ ಬಹಳಷ್ಟು ಉತ್ತಮವಾಗಿದ್ದು, ನಿಯಮಬದ್ಧ ತೆರಿಗೆ ಪಾವತಿಯಿಂದ ಸದೃಢ ಹಾಗೂ ಸಮತೋಲನ ಆರ್ಥಿಕ ಅಭಿವೃದ್ಧಿ ಸಾಧ್ಯವೆಂದು ಬೆಳ್ತಂಗಡಿಯ ಚಾರ್ಟರ್ಡ್ ಅಕೌಂಟೆಂಟ್ ಶ್ರೀಮತಿ ಗಾಯತ್ರಿ ರಾವ್ ತಿಳಿಸಿದರು. ಅವರು ಇತ್ತೀಚೆಗೆ ಶ್ರೀ.ಧ.ಮ ಕಾಲೇಜಿನ ಅರ್ಥಶಾಸ್ತ್ರ ಹಾಗೂ ಗ್ರಾಮೀಣ ಅಭಿವೃದ್ಧಿ ವಿಭಾಗ ಅಯೋಜಿಸಿದ ‘ತೆರಿಗೆಯ ಮೂಲಭೂತ ಅಂಶಗಳು’ ಎಂಬ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತಿದ್ದರು.

 “ಚಾಣಕ್ಯ ನೀತಿಯಲ್ಲಿರುವ ಹಾಗೆ ತೆರಿಗೆ ಎಂದರೆ ಜೇನು ಹೂವಿನಿಂದ ಮಕರಂದವನ್ನು ಹೀರಿ ಹೇಗೆ ಜೇನು ತುಪ್ಪವನ್ನು ಕೊಡುತ್ತದೊ ಅದೇ ರೀತಿ ಸರಕಾರವು ಜನರಿಂದ ತೆರಿಗೆಯನ್ನು ಸಂಗ್ರಹಿಸಿ ಜನರಿಗೆ ಉಪಯೋಗವಾಗುವಂತ ಕೆಲಸಗಳನ್ನು ಮಾಡಬೇಕು” ಎಂದು ಹೇಳಿದರು. 

 ತೆರಿಗೆ ಪಾವತಿಯ ಬಗ್ಗೆ ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ತಿಳಿದುಕೊಂಡು ಸಮಯಕ್ಕೆ ಸರಿಯಾಗಿ ಪಾವತಿಸಿದರೆ ಆರ್ಥಿಕತೆ ಬಲಗೊಳ್ಳುವುದಲ್ಲದೆ ಸಾಮಾಜಿಕ ನ್ಯಾಯವನ್ನು ಕೂಡ ಖಚಿತಪಡಿಸಿಕೊಳ್ಳಲು ಸಾಧ್ಯ ಎಂದು ಅವರು ಹೇಳಿದರು.

ವಿಭಾಗ ವರಿಷ್ಠ ಗಣರಾಜ್ ಕೆ, ಪ್ರಧ್ಯಾಪಕರಾದ ಡಾ.ಮಹೇಶ್ ಕುಮಾರ್ ಶೆಟ್ಟಿ ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅನುಷಾ ಜಿ ಶೆಟ್ಟಿ ಸ್ವಾಗತಿಸಿ, ಪೂರ್ವಿತ ವಂದಿಸಿದರು

Related posts

ಮುಂಡಾಜೆ ಕಾಯರ್ತೋಡಿ ರಾಧಾ ಹೆಬ್ಬಾರ್‌ರವರ ತೋಟಕ್ಕೆ ನುಗ್ಗಿದ ನೇತ್ರಾವತಿ ನದಿ ನೀರು: 25 ಅಡಿಕೆ ಮರ ಹಾಗೂ 10 ರಬ್ಬರ್ ಮರ ಧರಾಶಾಯಿ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿ ಭಾರಿ ಕಾಡ್ಗಿಚ್ಚು

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಮೋಹಿತ್ ತೃತೀಯ ಸ್ಥಾನ

Suddi Udaya

ಜು.13: ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ

Suddi Udaya

ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya
error: Content is protected !!