25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ.ಧ.ಮಂ. ಕಾಲೇಜಿನಲ್ಲಿ ‘ತೆರಿಗೆಯ ಮೂಲಭೂತ ಅಂಶಗಳು’ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ

ಉಜಿರೆ : ಭಾರತದ ತೆರಿಗೆ ಕಾಯ್ದೆ ಬಹಳಷ್ಟು ಉತ್ತಮವಾಗಿದ್ದು, ನಿಯಮಬದ್ಧ ತೆರಿಗೆ ಪಾವತಿಯಿಂದ ಸದೃಢ ಹಾಗೂ ಸಮತೋಲನ ಆರ್ಥಿಕ ಅಭಿವೃದ್ಧಿ ಸಾಧ್ಯವೆಂದು ಬೆಳ್ತಂಗಡಿಯ ಚಾರ್ಟರ್ಡ್ ಅಕೌಂಟೆಂಟ್ ಶ್ರೀಮತಿ ಗಾಯತ್ರಿ ರಾವ್ ತಿಳಿಸಿದರು. ಅವರು ಇತ್ತೀಚೆಗೆ ಶ್ರೀ.ಧ.ಮ ಕಾಲೇಜಿನ ಅರ್ಥಶಾಸ್ತ್ರ ಹಾಗೂ ಗ್ರಾಮೀಣ ಅಭಿವೃದ್ಧಿ ವಿಭಾಗ ಅಯೋಜಿಸಿದ ‘ತೆರಿಗೆಯ ಮೂಲಭೂತ ಅಂಶಗಳು’ ಎಂಬ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತಿದ್ದರು.

 “ಚಾಣಕ್ಯ ನೀತಿಯಲ್ಲಿರುವ ಹಾಗೆ ತೆರಿಗೆ ಎಂದರೆ ಜೇನು ಹೂವಿನಿಂದ ಮಕರಂದವನ್ನು ಹೀರಿ ಹೇಗೆ ಜೇನು ತುಪ್ಪವನ್ನು ಕೊಡುತ್ತದೊ ಅದೇ ರೀತಿ ಸರಕಾರವು ಜನರಿಂದ ತೆರಿಗೆಯನ್ನು ಸಂಗ್ರಹಿಸಿ ಜನರಿಗೆ ಉಪಯೋಗವಾಗುವಂತ ಕೆಲಸಗಳನ್ನು ಮಾಡಬೇಕು” ಎಂದು ಹೇಳಿದರು. 

 ತೆರಿಗೆ ಪಾವತಿಯ ಬಗ್ಗೆ ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ತಿಳಿದುಕೊಂಡು ಸಮಯಕ್ಕೆ ಸರಿಯಾಗಿ ಪಾವತಿಸಿದರೆ ಆರ್ಥಿಕತೆ ಬಲಗೊಳ್ಳುವುದಲ್ಲದೆ ಸಾಮಾಜಿಕ ನ್ಯಾಯವನ್ನು ಕೂಡ ಖಚಿತಪಡಿಸಿಕೊಳ್ಳಲು ಸಾಧ್ಯ ಎಂದು ಅವರು ಹೇಳಿದರು.

ವಿಭಾಗ ವರಿಷ್ಠ ಗಣರಾಜ್ ಕೆ, ಪ್ರಧ್ಯಾಪಕರಾದ ಡಾ.ಮಹೇಶ್ ಕುಮಾರ್ ಶೆಟ್ಟಿ ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅನುಷಾ ಜಿ ಶೆಟ್ಟಿ ಸ್ವಾಗತಿಸಿ, ಪೂರ್ವಿತ ವಂದಿಸಿದರು

Related posts

ಕಳೆಂಜ ಗ್ರಾ.ಪಂ. ಹಾಗೂ ಜನನಿ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ

Suddi Udaya

ಸುಲ್ಕೇರಿಮೊಗ್ರು ಹೊಸಮನೆ ನಿವಾಸಿ ನೀಲಮ್ಮ ನಿಧನ

Suddi Udaya

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿವೇತನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಂಪೂರ್ಣ ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಅನುದಾನ ಬಿಡುಗಡೆಗೊಳಿಸುವಂತೆ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya
error: Content is protected !!