23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ.ಧ.ಮಂ. ಕಾಲೇಜಿನಲ್ಲಿ ‘ತೆರಿಗೆಯ ಮೂಲಭೂತ ಅಂಶಗಳು’ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ

ಉಜಿರೆ : ಭಾರತದ ತೆರಿಗೆ ಕಾಯ್ದೆ ಬಹಳಷ್ಟು ಉತ್ತಮವಾಗಿದ್ದು, ನಿಯಮಬದ್ಧ ತೆರಿಗೆ ಪಾವತಿಯಿಂದ ಸದೃಢ ಹಾಗೂ ಸಮತೋಲನ ಆರ್ಥಿಕ ಅಭಿವೃದ್ಧಿ ಸಾಧ್ಯವೆಂದು ಬೆಳ್ತಂಗಡಿಯ ಚಾರ್ಟರ್ಡ್ ಅಕೌಂಟೆಂಟ್ ಶ್ರೀಮತಿ ಗಾಯತ್ರಿ ರಾವ್ ತಿಳಿಸಿದರು. ಅವರು ಇತ್ತೀಚೆಗೆ ಶ್ರೀ.ಧ.ಮ ಕಾಲೇಜಿನ ಅರ್ಥಶಾಸ್ತ್ರ ಹಾಗೂ ಗ್ರಾಮೀಣ ಅಭಿವೃದ್ಧಿ ವಿಭಾಗ ಅಯೋಜಿಸಿದ ‘ತೆರಿಗೆಯ ಮೂಲಭೂತ ಅಂಶಗಳು’ ಎಂಬ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತಿದ್ದರು.

 “ಚಾಣಕ್ಯ ನೀತಿಯಲ್ಲಿರುವ ಹಾಗೆ ತೆರಿಗೆ ಎಂದರೆ ಜೇನು ಹೂವಿನಿಂದ ಮಕರಂದವನ್ನು ಹೀರಿ ಹೇಗೆ ಜೇನು ತುಪ್ಪವನ್ನು ಕೊಡುತ್ತದೊ ಅದೇ ರೀತಿ ಸರಕಾರವು ಜನರಿಂದ ತೆರಿಗೆಯನ್ನು ಸಂಗ್ರಹಿಸಿ ಜನರಿಗೆ ಉಪಯೋಗವಾಗುವಂತ ಕೆಲಸಗಳನ್ನು ಮಾಡಬೇಕು” ಎಂದು ಹೇಳಿದರು. 

 ತೆರಿಗೆ ಪಾವತಿಯ ಬಗ್ಗೆ ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ತಿಳಿದುಕೊಂಡು ಸಮಯಕ್ಕೆ ಸರಿಯಾಗಿ ಪಾವತಿಸಿದರೆ ಆರ್ಥಿಕತೆ ಬಲಗೊಳ್ಳುವುದಲ್ಲದೆ ಸಾಮಾಜಿಕ ನ್ಯಾಯವನ್ನು ಕೂಡ ಖಚಿತಪಡಿಸಿಕೊಳ್ಳಲು ಸಾಧ್ಯ ಎಂದು ಅವರು ಹೇಳಿದರು.

ವಿಭಾಗ ವರಿಷ್ಠ ಗಣರಾಜ್ ಕೆ, ಪ್ರಧ್ಯಾಪಕರಾದ ಡಾ.ಮಹೇಶ್ ಕುಮಾರ್ ಶೆಟ್ಟಿ ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅನುಷಾ ಜಿ ಶೆಟ್ಟಿ ಸ್ವಾಗತಿಸಿ, ಪೂರ್ವಿತ ವಂದಿಸಿದರು

Related posts

ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ ಹಾಗೂ ಉಚಿತ ಮಹಿಳೆಯರ ಕ್ಯಾನ್ಸರ್ ತಪಾಸಣಾ ಶಿಬಿರ

Suddi Udaya

ಕಣಿಯೂರು ವಲಯದ ಪದ್ಮುಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ಗೌರಿ ಜ್ಞಾನ ವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಗ್ರಾ.ಪಂ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪ.ಪಂಗಡಕ್ಕೆ ನೀರಿನ ಟ್ಯಾಂಕ್ ಮತ್ತು ವಿಶೇಷಚೇತನರಿಗೆ ವೀಲ್ ಚೇರ್ ವಿತರಣೆ

Suddi Udaya

ಡಿ.3: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ “ಜನಾಂದೋಲನ ಸಭೆ”: ರಕ್ತದ ಸಹಿಯ ಮೂಲಕ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಯವರಿಗೆ ಮನವಿ

Suddi Udaya

ಕಕ್ಕಿಂಜೆ ರಸ್ತೆಯ ಮಧ್ಯೆ ಕೆಟ್ಟು ನಿಂತ ಲಾರಿ: ಒಂದು ಗಂಟೆಗಿಂತ ಅಧಿಕ ಕಾಲ ಟ್ರಾಫಿಕ್ ಜಾಮ್

Suddi Udaya

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

Suddi Udaya
error: Content is protected !!