22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ.ಧ.ಮಂ. ಕಾಲೇಜಿನಲ್ಲಿ ‘ತೆರಿಗೆಯ ಮೂಲಭೂತ ಅಂಶಗಳು’ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ

ಉಜಿರೆ : ಭಾರತದ ತೆರಿಗೆ ಕಾಯ್ದೆ ಬಹಳಷ್ಟು ಉತ್ತಮವಾಗಿದ್ದು, ನಿಯಮಬದ್ಧ ತೆರಿಗೆ ಪಾವತಿಯಿಂದ ಸದೃಢ ಹಾಗೂ ಸಮತೋಲನ ಆರ್ಥಿಕ ಅಭಿವೃದ್ಧಿ ಸಾಧ್ಯವೆಂದು ಬೆಳ್ತಂಗಡಿಯ ಚಾರ್ಟರ್ಡ್ ಅಕೌಂಟೆಂಟ್ ಶ್ರೀಮತಿ ಗಾಯತ್ರಿ ರಾವ್ ತಿಳಿಸಿದರು. ಅವರು ಇತ್ತೀಚೆಗೆ ಶ್ರೀ.ಧ.ಮ ಕಾಲೇಜಿನ ಅರ್ಥಶಾಸ್ತ್ರ ಹಾಗೂ ಗ್ರಾಮೀಣ ಅಭಿವೃದ್ಧಿ ವಿಭಾಗ ಅಯೋಜಿಸಿದ ‘ತೆರಿಗೆಯ ಮೂಲಭೂತ ಅಂಶಗಳು’ ಎಂಬ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತಿದ್ದರು.

 “ಚಾಣಕ್ಯ ನೀತಿಯಲ್ಲಿರುವ ಹಾಗೆ ತೆರಿಗೆ ಎಂದರೆ ಜೇನು ಹೂವಿನಿಂದ ಮಕರಂದವನ್ನು ಹೀರಿ ಹೇಗೆ ಜೇನು ತುಪ್ಪವನ್ನು ಕೊಡುತ್ತದೊ ಅದೇ ರೀತಿ ಸರಕಾರವು ಜನರಿಂದ ತೆರಿಗೆಯನ್ನು ಸಂಗ್ರಹಿಸಿ ಜನರಿಗೆ ಉಪಯೋಗವಾಗುವಂತ ಕೆಲಸಗಳನ್ನು ಮಾಡಬೇಕು” ಎಂದು ಹೇಳಿದರು. 

 ತೆರಿಗೆ ಪಾವತಿಯ ಬಗ್ಗೆ ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ತಿಳಿದುಕೊಂಡು ಸಮಯಕ್ಕೆ ಸರಿಯಾಗಿ ಪಾವತಿಸಿದರೆ ಆರ್ಥಿಕತೆ ಬಲಗೊಳ್ಳುವುದಲ್ಲದೆ ಸಾಮಾಜಿಕ ನ್ಯಾಯವನ್ನು ಕೂಡ ಖಚಿತಪಡಿಸಿಕೊಳ್ಳಲು ಸಾಧ್ಯ ಎಂದು ಅವರು ಹೇಳಿದರು.

ವಿಭಾಗ ವರಿಷ್ಠ ಗಣರಾಜ್ ಕೆ, ಪ್ರಧ್ಯಾಪಕರಾದ ಡಾ.ಮಹೇಶ್ ಕುಮಾರ್ ಶೆಟ್ಟಿ ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅನುಷಾ ಜಿ ಶೆಟ್ಟಿ ಸ್ವಾಗತಿಸಿ, ಪೂರ್ವಿತ ವಂದಿಸಿದರು

Related posts

ಗೇರುಕಟ್ಟೆ : ಕಳಿಯ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ನಲ್ಲಿ ದ್ವಿತೀಯ ಸ್ಥಾನ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಎಮ್.ಆರ್.ಪಿ.ಎಲ್ – ಸಿಎಸ್ಆರ್ ಯೋಜನೆಯಡಿ “ಶ್ರೀ ಕೃಷ್ಣ ಯೋಗಕ್ಷೇಮ” ಅಂಬುಲೆನ್ಸ್ ಹಸ್ತಾಂತರ

Suddi Udaya

ದಿ. ವೀರಪ್ಪ ನಲ್ಕೆ ಪುಣ್ಯ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಣೆ

Suddi Udaya

ಸವಣಾಲು : ಮಂಜದಬೆಟ್ಟು ನಿವಾಸಿ ನಾರಾಯಣ ಆಚಾರ್ಯ ನಿಧನ

Suddi Udaya
error: Content is protected !!