July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ ಮತ್ತು ವಾರ್ಷಿಕ ಮಹಾಸಭೆ

ನಡ: ನಡ ಗ್ರಾಮದ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಇದರ ಗುರುಪೂಜೆ ಮತ್ತು ವಾರ್ಷಿಕ ಮಹಾಸಭೆಯು ಮೇ 28ರಂದು ವೀರಪ್ಪ ಪೂಜಾರಿ ಕೊಟ್ಲಪ್ಪಾಡಿ ರವರ ಅಧ್ಯಕ್ಷತೆಯಲ್ಲಿ ಶ್ರೀ ನಾರಾಯಣ ಗುರು ಸಮುದಾಯ ಭವನ ನಡ ಮಂಜೊಟ್ಟಿಯಲ್ಲಿ ನಡೆಯಿತು.

ಬೆಳಗ್ಗೆ ಗಣಹೋಮ, ಭಜನೆ, ಗುರುಪೂಜೆ ಮತ್ತು ಸಭಾ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ನಿವೃತ್ತ ಮುಖ್ಯೋಪಾಧ್ಯಯರು ಜ್ಯೋತಿ ಕೃಷ್ಣಪ್ಪ ಪೂಜಾರಿ ಕುದುಪುಲ, ಮಾಜಿ ಸೈನಿಕರು ಶಿವಾಜಿ, ಡಾಕ್ಟರ್ ಹವ್ಯಶ್ರೀ ಮೋಹನ್ ರಾಜ್, ರಾಜ್ಯ ಪ್ರಶಸ್ತಿ ವಿಜೇತ ಜಯಾನಂದ ಅಂಕಾಜೆ, ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ , ದೇವೇಂದ್ರ ಪೂಜಾರಿ, ಕಾರ್ತಿಕ್, ಶ್ರೀಮತಿ ವಸಂತಿ, ವಸಂತ ಕುತ್ತೊಟ್ಟು, ಜಯಕುಮಾರ್ ಸುರ್ಯ, ಶ್ರೀ ಚಿದಾನಂದ ಪೂಜಾರಿ ಎಲ್ಲಡ್ಕ, ಅಭಿನಂದನ್ ಉಪಸ್ಥಿತರಿದ್ದರು.

ಅನನ್ಯ ಇವರ ಪ್ರಾರ್ಥನೆಯೊಂದಿಗೆ ಜಯಕುಮಾರ್ ಸುರ್ಯ ಸ್ವಾಗತಿಸಿದರು. ಗುರುನಾರಾಯಣ ಸ್ವಾಮಿ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ಮೀನಾಕ್ಷಿ.ಕೆ ಬಂಡಾರಿಕೋಡಿ ವಂದಿಸಿದರು.

Related posts

ಬೆಳ್ತಂಗಡಿ: ಬಗರ್ ಹುಕುಂ ಅಕ್ರಮ–ಸಕ್ರಮ ಸಮಿತಿಯ ಸಭೆ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ (ತೆನೆ ) ಹಬ್ಬ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಗಿಡಮೂಲಿಕೆಗಳ ಮಹತ್ವದ ಬಗ್ಗೆ ಕಿರು ಉಪನ್ಯಾಸ

Suddi Udaya

ಹೆದ್ದಾರಿ ಕಾಮಗಾರಿಯನ್ನು ರಾತ್ರೋರಾತ್ರಿ ವೀಕ್ಷಿಸಿದ ಹರೀಶ್ ಪೂಂಜ

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ನೂತನ ವಿಜಯಗೋಪುರ ಲೋಕಾರ್ಪಣೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಅಭಿಯಾನ ಹಾಗೂ ಕನಕದಾಸ ಜಯಂತಿ ಕಾರ್ಯಕ್ರಮ

Suddi Udaya
error: Content is protected !!