23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ ಮತ್ತು ವಾರ್ಷಿಕ ಮಹಾಸಭೆ

ನಡ: ನಡ ಗ್ರಾಮದ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಇದರ ಗುರುಪೂಜೆ ಮತ್ತು ವಾರ್ಷಿಕ ಮಹಾಸಭೆಯು ಮೇ 28ರಂದು ವೀರಪ್ಪ ಪೂಜಾರಿ ಕೊಟ್ಲಪ್ಪಾಡಿ ರವರ ಅಧ್ಯಕ್ಷತೆಯಲ್ಲಿ ಶ್ರೀ ನಾರಾಯಣ ಗುರು ಸಮುದಾಯ ಭವನ ನಡ ಮಂಜೊಟ್ಟಿಯಲ್ಲಿ ನಡೆಯಿತು.

ಬೆಳಗ್ಗೆ ಗಣಹೋಮ, ಭಜನೆ, ಗುರುಪೂಜೆ ಮತ್ತು ಸಭಾ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ನಿವೃತ್ತ ಮುಖ್ಯೋಪಾಧ್ಯಯರು ಜ್ಯೋತಿ ಕೃಷ್ಣಪ್ಪ ಪೂಜಾರಿ ಕುದುಪುಲ, ಮಾಜಿ ಸೈನಿಕರು ಶಿವಾಜಿ, ಡಾಕ್ಟರ್ ಹವ್ಯಶ್ರೀ ಮೋಹನ್ ರಾಜ್, ರಾಜ್ಯ ಪ್ರಶಸ್ತಿ ವಿಜೇತ ಜಯಾನಂದ ಅಂಕಾಜೆ, ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ , ದೇವೇಂದ್ರ ಪೂಜಾರಿ, ಕಾರ್ತಿಕ್, ಶ್ರೀಮತಿ ವಸಂತಿ, ವಸಂತ ಕುತ್ತೊಟ್ಟು, ಜಯಕುಮಾರ್ ಸುರ್ಯ, ಶ್ರೀ ಚಿದಾನಂದ ಪೂಜಾರಿ ಎಲ್ಲಡ್ಕ, ಅಭಿನಂದನ್ ಉಪಸ್ಥಿತರಿದ್ದರು.

ಅನನ್ಯ ಇವರ ಪ್ರಾರ್ಥನೆಯೊಂದಿಗೆ ಜಯಕುಮಾರ್ ಸುರ್ಯ ಸ್ವಾಗತಿಸಿದರು. ಗುರುನಾರಾಯಣ ಸ್ವಾಮಿ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ಮೀನಾಕ್ಷಿ.ಕೆ ಬಂಡಾರಿಕೋಡಿ ವಂದಿಸಿದರು.

Related posts

ಶಿಶಿಲ: ಬರ್ಗುಳದಲ್ಲಿ ಹದಗೆಟ್ಟ ರಸ್ತೆ : ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕ ಸ್ವಯಂಸೇವಕರಿಂದ ದುರಸ್ತಿ ಕಾರ್ಯ

Suddi Udaya

ಶ್ರೀ ರಾಮ ಮಂದಿರದ ಹನುಮ ರಥಕ್ಕೆ ಸ್ವಾಗತ

Suddi Udaya

ಧರ್ಮಸ್ಥಳ: 22ನೇ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಯ ಫಲಿತಾಂಶ

Suddi Udaya

ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ಶೇಖರ್ ಗೌಡ ದೇವಸ ಸವಣಾಲು ನೇಮಕ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya
error: Content is protected !!