23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೈಕ್ ಗೆ ಅಡ್ಡ ಬಂದ ನಾಯಿ:ಪತ್ರಿಕೆ ವಿತರಕನಿಗೆ ಗಾಯ

ಕಡಿರುದ್ಯಾವರ: ಬೀದಿ ನಾಯಿಗಳು ಬೈಕಿಗೆ ಅಡ್ಡ ಬಂದ ಪರಿಣಾಮ ಪತ್ರಿಕೆ ವಿತರಕ ಬೈಕ್ ನಿಂದ ಬಿದ್ದು ಗಾಯಗೊಂಡ ಘಟನೆ ಕಡಿರುದ್ಯಾವರ ಗ್ರಾಮದ ಕಾನರ್ಪ ಶಾಲೆಯ ಬಳಿ ನಡೆದಿದೆ.

ಮುಂಡಾಜೆಯ ಪತ್ರಿಕೆ ವಿತರಕ ಬಾಲಚಂದ್ರ ನಾಯಕ್(48) ಭಾನುವಾರ ಬೆಳಿಗ್ಗೆ 5:30ರ ಸುಮಾರಿಗೆ ಪತ್ರಿಕೆಗಳನ್ನು ಸೋಮಂತಡ್ಕದಿಂದ ದಿಡುಪೆ ಕಡೆ ಕೊಂಡೊಯ್ಯುತ್ತಿದ್ದ ವೇಳೆ ಕಾನರ್ಪ ಶಾಲೆಯ ಬಳಿ ಇವರು ಚಲಾಯಿಸುತ್ತಿದ್ದ ಬೈಕ್ ಗೆ ನಾಯಿ ಅಡ್ಡ ಬಂದು ರಸ್ತೆಗೆ ಉರುಳಿ ಬಿದ್ದು ಎರಡು ಕೈಗಳ ಮೂಳೆ ಮುರಿತಕ್ಕೊಳಗಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರು ಸಂಪೂರ್ಣ ಗುಣಮುಖರಾಗಲು ಸುಮಾರು ಎರಡು ತಿಂಗಳ ಅವಧಿ ಬೇಕಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ.ಸ್ಥಳೀಯರು ಇವರನ್ನು ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದರು.

Related posts

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಲಾಯಿಲ: ಗುಡ್ಡ ಜರಿದು ರಸ್ತೆ ಸಂಪರ್ಕ ಕಡಿತ

Suddi Udaya

ಶಿಶಿಲ: ಕೊಳಂಬೆ ನಿವಾಸಿ ಅಕ್ಕು ನಿಧನ

Suddi Udaya

ಭಾಜಪ ಬೆಳ್ತಂಗಡಿ ಮಂಡಲ ವತಿಯಿಂದ ವಿಜಯಸಂಕಲ್ಪ ಅಭಿಯಾನ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!