ಬೈಕ್ ಗೆ ಅಡ್ಡ ಬಂದ ನಾಯಿ:ಪತ್ರಿಕೆ ವಿತರಕನಿಗೆ ಗಾಯ

Suddi Udaya

ಕಡಿರುದ್ಯಾವರ: ಬೀದಿ ನಾಯಿಗಳು ಬೈಕಿಗೆ ಅಡ್ಡ ಬಂದ ಪರಿಣಾಮ ಪತ್ರಿಕೆ ವಿತರಕ ಬೈಕ್ ನಿಂದ ಬಿದ್ದು ಗಾಯಗೊಂಡ ಘಟನೆ ಕಡಿರುದ್ಯಾವರ ಗ್ರಾಮದ ಕಾನರ್ಪ ಶಾಲೆಯ ಬಳಿ ನಡೆದಿದೆ.

ಮುಂಡಾಜೆಯ ಪತ್ರಿಕೆ ವಿತರಕ ಬಾಲಚಂದ್ರ ನಾಯಕ್(48) ಭಾನುವಾರ ಬೆಳಿಗ್ಗೆ 5:30ರ ಸುಮಾರಿಗೆ ಪತ್ರಿಕೆಗಳನ್ನು ಸೋಮಂತಡ್ಕದಿಂದ ದಿಡುಪೆ ಕಡೆ ಕೊಂಡೊಯ್ಯುತ್ತಿದ್ದ ವೇಳೆ ಕಾನರ್ಪ ಶಾಲೆಯ ಬಳಿ ಇವರು ಚಲಾಯಿಸುತ್ತಿದ್ದ ಬೈಕ್ ಗೆ ನಾಯಿ ಅಡ್ಡ ಬಂದು ರಸ್ತೆಗೆ ಉರುಳಿ ಬಿದ್ದು ಎರಡು ಕೈಗಳ ಮೂಳೆ ಮುರಿತಕ್ಕೊಳಗಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರು ಸಂಪೂರ್ಣ ಗುಣಮುಖರಾಗಲು ಸುಮಾರು ಎರಡು ತಿಂಗಳ ಅವಧಿ ಬೇಕಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ.ಸ್ಥಳೀಯರು ಇವರನ್ನು ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದರು.

Leave a Comment

error: Content is protected !!