26.3 C
ಪುತ್ತೂರು, ಬೆಳ್ತಂಗಡಿ
May 18, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೈಕ್ ಗೆ ಅಡ್ಡ ಬಂದ ನಾಯಿ:ಪತ್ರಿಕೆ ವಿತರಕನಿಗೆ ಗಾಯ

ಕಡಿರುದ್ಯಾವರ: ಬೀದಿ ನಾಯಿಗಳು ಬೈಕಿಗೆ ಅಡ್ಡ ಬಂದ ಪರಿಣಾಮ ಪತ್ರಿಕೆ ವಿತರಕ ಬೈಕ್ ನಿಂದ ಬಿದ್ದು ಗಾಯಗೊಂಡ ಘಟನೆ ಕಡಿರುದ್ಯಾವರ ಗ್ರಾಮದ ಕಾನರ್ಪ ಶಾಲೆಯ ಬಳಿ ನಡೆದಿದೆ.

ಮುಂಡಾಜೆಯ ಪತ್ರಿಕೆ ವಿತರಕ ಬಾಲಚಂದ್ರ ನಾಯಕ್(48) ಭಾನುವಾರ ಬೆಳಿಗ್ಗೆ 5:30ರ ಸುಮಾರಿಗೆ ಪತ್ರಿಕೆಗಳನ್ನು ಸೋಮಂತಡ್ಕದಿಂದ ದಿಡುಪೆ ಕಡೆ ಕೊಂಡೊಯ್ಯುತ್ತಿದ್ದ ವೇಳೆ ಕಾನರ್ಪ ಶಾಲೆಯ ಬಳಿ ಇವರು ಚಲಾಯಿಸುತ್ತಿದ್ದ ಬೈಕ್ ಗೆ ನಾಯಿ ಅಡ್ಡ ಬಂದು ರಸ್ತೆಗೆ ಉರುಳಿ ಬಿದ್ದು ಎರಡು ಕೈಗಳ ಮೂಳೆ ಮುರಿತಕ್ಕೊಳಗಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರು ಸಂಪೂರ್ಣ ಗುಣಮುಖರಾಗಲು ಸುಮಾರು ಎರಡು ತಿಂಗಳ ಅವಧಿ ಬೇಕಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ.ಸ್ಥಳೀಯರು ಇವರನ್ನು ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದರು.

Related posts

ಜೂ.14: ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರ

Suddi Udaya

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನ ರಾಜುರಾಮ್ ರಾಜಸ್ಥಾನದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಾವು

Suddi Udaya

ಬೆಳ್ತಂಗಡಿ ಯುವವಾಹಿನಿಯಿಂದ ‘ತುಳುನಾಡ ತುಡರ ಪರ್ಬ ‘

Suddi Udaya
error: Content is protected !!