July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೈಕ್ ಗೆ ಅಡ್ಡ ಬಂದ ನಾಯಿ:ಪತ್ರಿಕೆ ವಿತರಕನಿಗೆ ಗಾಯ

ಕಡಿರುದ್ಯಾವರ: ಬೀದಿ ನಾಯಿಗಳು ಬೈಕಿಗೆ ಅಡ್ಡ ಬಂದ ಪರಿಣಾಮ ಪತ್ರಿಕೆ ವಿತರಕ ಬೈಕ್ ನಿಂದ ಬಿದ್ದು ಗಾಯಗೊಂಡ ಘಟನೆ ಕಡಿರುದ್ಯಾವರ ಗ್ರಾಮದ ಕಾನರ್ಪ ಶಾಲೆಯ ಬಳಿ ನಡೆದಿದೆ.

ಮುಂಡಾಜೆಯ ಪತ್ರಿಕೆ ವಿತರಕ ಬಾಲಚಂದ್ರ ನಾಯಕ್(48) ಭಾನುವಾರ ಬೆಳಿಗ್ಗೆ 5:30ರ ಸುಮಾರಿಗೆ ಪತ್ರಿಕೆಗಳನ್ನು ಸೋಮಂತಡ್ಕದಿಂದ ದಿಡುಪೆ ಕಡೆ ಕೊಂಡೊಯ್ಯುತ್ತಿದ್ದ ವೇಳೆ ಕಾನರ್ಪ ಶಾಲೆಯ ಬಳಿ ಇವರು ಚಲಾಯಿಸುತ್ತಿದ್ದ ಬೈಕ್ ಗೆ ನಾಯಿ ಅಡ್ಡ ಬಂದು ರಸ್ತೆಗೆ ಉರುಳಿ ಬಿದ್ದು ಎರಡು ಕೈಗಳ ಮೂಳೆ ಮುರಿತಕ್ಕೊಳಗಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರು ಸಂಪೂರ್ಣ ಗುಣಮುಖರಾಗಲು ಸುಮಾರು ಎರಡು ತಿಂಗಳ ಅವಧಿ ಬೇಕಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ.ಸ್ಥಳೀಯರು ಇವರನ್ನು ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದರು.

Related posts

ಬೆಳ್ತಂಗಡಿಯ 5 ಮಂದಿ ಕೃಷಿಕರಿಗೆ ಅತ್ಯುತ್ತಮ ಸಾವಯವ ಪ್ರೋತ್ಸಾಹ ರೈತ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು ,ವಾಣಿ ಪ.ಪೂ. ಕಾಲೇಜು ಬೆಳ್ತಂಗಡಿ ಸಿಐಎಸ್‌ಎ2ಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೋಡೆ-ಎಲ್ಲೆ ಬಿಡುಗಡೆ

Suddi Udaya

ಹಿರಿಯ ವ್ಯಂಗ್ಯಚಿತ್ರ ಕಲಾವಿದ ಬಿ. ವಿಲ್ಸನ್‌ ರಿಂದ ಹುಬ್ಬಳ್ಳಿಯಲ್ಲಿ ವ್ಯಂಗ್ಯಚಿತ್ರ ತರಬೇತಿ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ : ರಾಜ್ಯಮಟ್ಟದ 44ನೇ ವಷ೯ದ ವಸ್ತುಪ್ರದರ್ಶನ ಉದ್ಘಾಟನೆ

Suddi Udaya

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
error: Content is protected !!