25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ, ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ನೇತೃತ್ವದಲ್ಲಿ ಹೆಚ್. ಐ.ವಿ ಸೋಂಕಿತ ಹಾಗೂ ಬಾಧಿತ ಮಕ್ಕಳ ರಜಾ ಶಿಬಿರ ಮಾಸಿಕ ಬೆಂಬಲ ಸಭೆಯು ಮೇ 27 ರಂದು ಬೆಳ್ತಂಗಡಿ ಸಾಂತೋಮ್ ಟವರ್ ನಲ್ಲಿ ನಡೆಯಿತು.

ಬೆಳ್ತಂಗಡಿ ಧರ್ಮಪ್ರಾಂತ್ಯದ ಫ್ಯಾಮಿಲಿ ಅಪೋಸ್ತಲೇಟ್ ನಿರ್ದೇಶಕರಾದ ವಂದನೀಯ ಫಾ. ತೋಮಸ್ ಪುಲ್ಲಾಟ್ ರವರು ದೀಪ ಬೆಳಗಿಸಿ ಶಿಬಿರ ಉದ್ಘಾಟಿಸಿದರು. ನವಚೈತನ್ಯ ಸಂಘದ ಅಧ್ಯಕ್ಷೆ ಶ್ರೀಮತಿ ಲಲಿತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಡಿಬಾಗಿಲು ಸಂತ ತೋಮಸ್ ಚರ್ಚಿನ ಧರ್ಮಗುರುಗಳಾದ ವಂದನೀಯ ಫಾ. ಜೋಸ್ ಆಯಾಂಕುಡಿ, ಆರಾಧನಾ ಕಾನ್ವೆಂಟಿನ ಭಗಿನಿ, ಸಂಡೇ ಸ್ಕೂಲ್ ಅಧ್ಯಾಪಕರು, ಮಿಷನ್ ಲೀಗ್ ಪದಾಧಿಕಾರಿಗಳು ಅತಿಥಿಗಳಾಗಿ ಆಗಮಿಸಿ ಆಹಾರ ಕಿಟ್ ಹಾಗೂ ಧನ ಸಹಾಯ ಹಸ್ತಾಂತರಿಸಿದರು. ಬೆಳ್ತಂಗಡಿ ತಾಲೂಕಿನ ಸಹಾಯ ಹಸ್ತ ತಂಡದ ಪದಾಧಿಕಾರಿಗಳಾದ ಸುನಿಲ್ ಮೊರಾಸ್, ಶ್ರೀಮತಿ ಡೈನಾ ಮಾರ್ಟಿಸ್ ಹಾಗೂ ಕು. ಶೈನಿ ಡಿ’ಸೋಜಾ ಅತಿಥಿಗಳಾಗಿ ಆಗಮಿಸಿ ಪುಸ್ತಕ ಹಾಗೂ ವಿದ್ಯಾರ್ಥಿ ವೇತನಕ್ಕಾಗಿ ಧನ ಸಹಾಯ ವಿತರಿಸಿದರು.

ಈ ಸಂದರ್ಭದಲ್ಲಿ ನವಜೀವನ ಇಸ್ರೇಲ್ ವತಿಯಿಂದ ಹೆಚ್.ಐ.ವಿ./ ಏಡ್ಸ್ ಕಾರ್ಯಕ್ರಮಕ್ಕಾಗಿ ಧನ ಸಹಾಯದ ಚೆಕ್ಕನ್ನು ಹಸ್ತಾಂತರಿಸಲಾಯಿತು. ರುಡ್ ಸೆಟ್ ಸಂಸ್ಥೆಯ ತರಬೇತುದಾರರಾದ ಜೇಮ್ಸ್ ಅಬ್ರಹಾಂ ಹಾಗೂ ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ. ಮೇರಿ ಎಂ.ಜೆ. ಮಕ್ಕಳಿಗೆ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುವ ಮಾಹಿತಿ ಕಾರ್ಯಗಾರ ನಡೆಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾದರ್ ಬಿನೋಯಿ ಎ.ಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಲಾಯಿಲ ಜ್ಯೋತಿ ಆಸ್ಪತ್ರೆಯ ವೈದ್ಯಾಧಿಕಾರಿಯಾದ ಡಾ. ಸಿ. ಅನೂಜರವರು ಆರೋಗ್ಯ ತಪಾಸಣೆ ನಡೆಸಿದರು.

ಸಂಸ್ಥೆಯ ಸಂಯೋಜಕರಾದ ಸುನಿಲ್ ಗೊನ್ಸಾಲ್ವಿಸ್ ಸ್ವಾಗತಿಸಿ, ಸಂಸ್ಥೆಯ ಕಾರ್ಯಕರ್ತರಾದ ಮಾರ್ಕ್ ಡಿ ಸೋಜ ಹಾಗೂ ಸಂಯೋಜಕಿ ಶ್ರೀಮತಿ ಸಿಸಿಲ್ಯಾ ತಾವ್ರೊ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕರ್ತರಾದ ಜೋನ್ಸನ್ ರವರು ಧನ್ಯವಾದವಿತ್ತರು. ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯ ವಿಭಾಗ, ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು, ಎಸ್.ಡಿ.ಎಮ್ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿದ್ಯಾರ್ಥಿಗಳು ಹಾಗೂ ಕೇರಳದ ರಾಜಗಿರಿ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಹಾಗೂ ಹಲವಾರು ಮಂದಿ ಈ ಶಿಬಿರಕ್ಕೆ ಧನಸಹಾಯ ಮಾಡಿ ಶಿಬಿರದ ಯಶಸ್ಸಿಗೆ ಸಹಕರಿಸಿದ್ದಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯಲ್ಲಿ ರೂ. 986 ಕೋಟಿ ಒಟ್ಟು ವ್ಯವಹಾರ, ರೂ.12.01 ಕೋಟಿ ನಿವ್ವಳ ಲಾಭ

Suddi Udaya

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಚಾರ್ಮಾಡಿ ಚೆಕ್ ಪೋಸ್ಟ್ ಬಿಗಿ ತಪಾಸಣೆಗೆ ಕ್ರಮ-ಜಿಲ್ಲೆಯಿಂದ ಹೊರ ಹೋಗುವ,ಜಿಲ್ಲೆಗೆ ಆಗಮಿಸುವ ವಾಹನಗಳ ಬಗ್ಗೆ ತೀವ್ರ ನಿಗಾ

Suddi Udaya

ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

Suddi Udaya

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

Suddi Udaya
error: Content is protected !!