ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಜೇಸಿ ಸಂಸ್ಥೆ ವಲಯ 15ರ ವಲಯಾಡಳಿತ ಸಭೆ

ಕೊಕ್ಕಡ: ಭಾರತೀಯ ಜೇಸಿ ಸಂಸ್ಥೆ ವಲಯ 15 ಇದರ ನೂತನ ಸಾಲಿನ ಮೂರನೇ ವಲಯಾಡಳಿತ ಮಂಡಳಿ ಸಭೆಯು ನಿಡ್ಲೆ ಬಳಿ ಆನಂದ ರೆಸಾರ್ಟ್ ನಲ್ಲಿ ಮೇ.28 ರಂದು ಜರುಗಿತು.

ಜೇಸಿಐ ಕೊಕ್ಕಡ ಕಪಿಲಾ ಆತಿಥ್ಯದಲ್ಲಿ ಜರುಗಿದ ಸಮಾರಂಭ ಅಧ್ಯಕ್ಷತೆಯನ್ನು ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ವಹಿಸಿದ್ದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪೂರ್ವ ವಲಯಾಧ್ಯಕ್ಷ ಸಂತೋಷ ಜಿ. ಅವರು ಸಮಾಜದಲ್ಲಿ ಜೇಸಿ ಆಂದೋಲನವನ್ನು ಬಲಪಡಿಸಲು ಕರೆ ನೀಡಿದರು.

ಮಧ್ಯಂತರ ಸಮಾವೇಶದ ಪೂರ್ವಭಾವಿಯಾಗಿ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷ ರಾಯನ್ ಉದಯ ಕ್ರಾಸ್ತಾ, ವಲಯ ಉಪಾಧ್ಯಕ್ಷ ದೇವರಾಜ್ ಕುದ್ಪಾಜೆ, ಅಜಿತ್ ರೈ, ಭರತ್ ಶೆಟ್ಟಿ, ಸುಧಾಕರ ಆಚಾರ್ಯ, ಅಭಿಲಾಶ್ ಬಿ.ವಿ, ಆಡಳಿತ ಮಂಡಳಿಯ ನಿರ್ದೇಶಕ ಪ್ರಶಾಂತ ಲಾಯಿಲ, ಅಭಿವೃದ್ಧಿ ವಿಭಾಗದ ಮರಿಯಪ್ಪ, ಕಾರ್ಯಕ್ರಮ ವಿಭಾಗದ ಅಕ್ಷತಾ ಗಿರೀಶ್, ತರಬೇತಿ ವಿಭಾಗದ ಪ್ರದೀಪ್ ಬಾಕಿಲ, ಯುವ ಜೇಸಿ ವಿಭಾಗದ ಸ್ವಾತಿ ಜೆ. ರೈ ಹಾಗೂ ವಿನೀತ್ ಶಗ್ರಿತ್ತಾಯ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ವಿವಿಧ ವಿಭಾಗಗಳ ಮುಖ್ಯಸ್ಥರಾದ ಉದಕ ಪತ್ರಿಕೆ ಸಂಪಾದಕ ಮೋಹನ್ ಚಂದ್ರ, ನಿರ್ಮಲಾ ಜಯರಾಮ, ಸಂತೋಷ ಕುಮಾರ್ ಸಲಹೆ ಸೂಚನೆಗಳನ್ನು ನೀಡಿದರು.
ಇದೇ ಸಂದರ್ಭದಲ್ಲಿ ಸಭೆಯ ಆತಿಥ್ಯ ವಹಿಸಿದ ಕೊಕ್ಕಡ ಕಪಿಲಾ ಜೇಸಿ ಸದಸ್ಯರನ್ನು ಅಭಿನಂದಿಸಲಾಯಿತು.

ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ಸ್ವಾಗತಿಸಿದರು. ಯುವ ಜೇಸಿ ಶ್ರವಣ್ ಜೇಸಿ ವಾಣಿ ವಾಚಿಸಿದರು. ವಲಯದ ಕಾರ್ಯದರ್ಶಿ ಕಾಶೀನಾಥ್ ಗೋಗಟೇ ವಂದಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ರೂ.5 ಲಕ್ಷ ರೂ. ಹಸ್ತಾಂತರ

Suddi Udaya

ಪಾದಾಯಾತ್ರಿಗಳಿಗೆ ಕಲ್ಮಂಜದ ಮದಿಮಾಲಕಟ್ಟೆಯ ಜಾನಕಿ ಮತ್ತು ಮಕ್ಕಳಿಂದ ಅನ್ನದಾನ ಸೇವೆ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ಯಶಸ್ವಿ ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

Suddi Udaya

ಗುರುವಾಯನಕೆರೆ ಉರೂಸ್ ಧ್ವಜಾರೋಹಣ: ಫೆ.10 ವರೆಗೆ ಅಂತಾರಾಜ್ಯ ವಿದ್ವಾಂಸರಿಂದ ಧಾರ್ಮಿಕ ಪ್ರವಚನ

Suddi Udaya

ಫೆ.5-6: ಶಿಬಾಜೆ ಶ್ರೀಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾಯಾಗ ಮತ್ತು ನವೀಕೃತ ರಾಜಾಂಗಣದ ಲೋಕಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಭೇಟಿ

Suddi Udaya
error: Content is protected !!