26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಜೇಸಿ ಸಂಸ್ಥೆ ವಲಯ 15ರ ವಲಯಾಡಳಿತ ಸಭೆ

ಕೊಕ್ಕಡ: ಭಾರತೀಯ ಜೇಸಿ ಸಂಸ್ಥೆ ವಲಯ 15 ಇದರ ನೂತನ ಸಾಲಿನ ಮೂರನೇ ವಲಯಾಡಳಿತ ಮಂಡಳಿ ಸಭೆಯು ನಿಡ್ಲೆ ಬಳಿ ಆನಂದ ರೆಸಾರ್ಟ್ ನಲ್ಲಿ ಮೇ.28 ರಂದು ಜರುಗಿತು.

ಜೇಸಿಐ ಕೊಕ್ಕಡ ಕಪಿಲಾ ಆತಿಥ್ಯದಲ್ಲಿ ಜರುಗಿದ ಸಮಾರಂಭ ಅಧ್ಯಕ್ಷತೆಯನ್ನು ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ವಹಿಸಿದ್ದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪೂರ್ವ ವಲಯಾಧ್ಯಕ್ಷ ಸಂತೋಷ ಜಿ. ಅವರು ಸಮಾಜದಲ್ಲಿ ಜೇಸಿ ಆಂದೋಲನವನ್ನು ಬಲಪಡಿಸಲು ಕರೆ ನೀಡಿದರು.

ಮಧ್ಯಂತರ ಸಮಾವೇಶದ ಪೂರ್ವಭಾವಿಯಾಗಿ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷ ರಾಯನ್ ಉದಯ ಕ್ರಾಸ್ತಾ, ವಲಯ ಉಪಾಧ್ಯಕ್ಷ ದೇವರಾಜ್ ಕುದ್ಪಾಜೆ, ಅಜಿತ್ ರೈ, ಭರತ್ ಶೆಟ್ಟಿ, ಸುಧಾಕರ ಆಚಾರ್ಯ, ಅಭಿಲಾಶ್ ಬಿ.ವಿ, ಆಡಳಿತ ಮಂಡಳಿಯ ನಿರ್ದೇಶಕ ಪ್ರಶಾಂತ ಲಾಯಿಲ, ಅಭಿವೃದ್ಧಿ ವಿಭಾಗದ ಮರಿಯಪ್ಪ, ಕಾರ್ಯಕ್ರಮ ವಿಭಾಗದ ಅಕ್ಷತಾ ಗಿರೀಶ್, ತರಬೇತಿ ವಿಭಾಗದ ಪ್ರದೀಪ್ ಬಾಕಿಲ, ಯುವ ಜೇಸಿ ವಿಭಾಗದ ಸ್ವಾತಿ ಜೆ. ರೈ ಹಾಗೂ ವಿನೀತ್ ಶಗ್ರಿತ್ತಾಯ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ವಿವಿಧ ವಿಭಾಗಗಳ ಮುಖ್ಯಸ್ಥರಾದ ಉದಕ ಪತ್ರಿಕೆ ಸಂಪಾದಕ ಮೋಹನ್ ಚಂದ್ರ, ನಿರ್ಮಲಾ ಜಯರಾಮ, ಸಂತೋಷ ಕುಮಾರ್ ಸಲಹೆ ಸೂಚನೆಗಳನ್ನು ನೀಡಿದರು.
ಇದೇ ಸಂದರ್ಭದಲ್ಲಿ ಸಭೆಯ ಆತಿಥ್ಯ ವಹಿಸಿದ ಕೊಕ್ಕಡ ಕಪಿಲಾ ಜೇಸಿ ಸದಸ್ಯರನ್ನು ಅಭಿನಂದಿಸಲಾಯಿತು.

ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ಸ್ವಾಗತಿಸಿದರು. ಯುವ ಜೇಸಿ ಶ್ರವಣ್ ಜೇಸಿ ವಾಣಿ ವಾಚಿಸಿದರು. ವಲಯದ ಕಾರ್ಯದರ್ಶಿ ಕಾಶೀನಾಥ್ ಗೋಗಟೇ ವಂದಿಸಿದರು.

Related posts

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಕಳೆಂಜ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ಬಾಲಕಿಯರ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಜು.13: ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ

Suddi Udaya

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಭರದಿಂದ ಸಾಗುತ್ತಿದೆ ಅಯೋಧ್ಯೆ ಶಾಖಾಮಠದ ನಿರ್ಮಾಣ ಕೆಲಸ ಕಾರ್ಯಗಳು

Suddi Udaya
error: Content is protected !!