ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ವಿಶೇಷ ತರಬೇತಿ ದಿನಾಚರಣೆ

Suddi Udaya

ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಯುವ ಜೇಸಿಗಳಿಗೆ ‘ಗೈಡಡ್ ಬೈ ಪರ್ಪೋಸ್’ ಎಂಬ ವಿಶೇಷ ತರಬೇತಿ ದಿನಾಚರಣೆ ಮೇ. 28 ರಂದು ನಿಡ್ಲೆ ಬಳಿ ಆನಂದ ರೆಸಾರ್ಟ್ ನಲ್ಲಿ ನಡೆಸಲಾಯಿತು.

ತರಬೇತಿ ಶಿಬಿರವನ್ನು ವಲಯ 15 ಯುವ ಜೇಸಿ ವಿಭಾಗದ ನಿರ್ದೇಶಕರಾದ ಶ್ರೀಮತಿ ಸ್ವಾತಿ ಜಗನ್ನಾಥ ರೈ ದೀಪ ಬೆಳಗಿಸಿ ಉದ್ಘಾಟಿಸಿದರು.

ವಲಯ ತರಬೇತುದಾರ ಶಂಕರ್ ರಾವ್ ಅವರು ತರಬೇತಿ ನೀಡಿದರು. ಜೇಸಿ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ಅಧ್ಯಕ್ಷತೆ ವಹಿಸಿದ್ದರು.

ಯುವ ಜೇಸಿಗಳಾದ ಕು. ಹರ್ಷಿತಾ, ಕು. ಅನನ್ಯ ಅವರು ಕ್ರಮವಾಗಿ ಉದ್ಘಾಟಕರು ಹಾಗೂ ಸಂಪನ್ಮೂಲ ವ್ಯಕ್ತಿಗಳ
ಪರಿಚಯ ಮಾಡಿದರು. ಸಾತ್ವಿಕ್, ಕು. ನಿಶಿತಾ , ಕು. ಅನನ್ಯ ಶಿಬಿರಾರ್ಥಿಗಳ ಪರವಾಗಿ ಅನಿಸಿಕೆ ತಿಳಿಸಿದರು.

ಯುವ ಜೇಸಿ ಶ್ರವಣ್ ಜೇಸಿ ವಾಣಿ ವಾಚಿಸಿದರು. ನಿಕಟಪೂರ್ವ ಅಧ್ಯಕ್ಷ ಕೆ. ಶ್ರೀಧರ್ ರಾವ್, ಮಹಿಳಾ ಜೇಸಿ ವಿಭಾಗ ಮುಖ್ಯಸ್ಥರಾದ ದೀಪಾ ವಿ., ಸದಸ್ಯರಾದ ರಾಜಾರಾಮ, ಶ್ರೀಮತಿ ಜೆಸಿಂತಾ ಡಿ ಸೋಜ, ಶ್ರೀಮತಿ ಮನೋರಮಾ, ಜೋಸೆಫ್ ಪಿರೇರಾ, ಉಪಾಧ್ಯಕ್ಷ ಯು. ನರಸಿಂಹ ನಾಯಕ್, ಕೋಶಾಧಿಕಾರಿ ಜಸ್ವಂತ್ ಪಿರೇರಾ ಉಪಸ್ಥಿತರಿದ್ದರು.

ಕಾರ್ಯದರ್ಶಿ ವಿಕ್ಟರ್ ಸುವಾರಿಸ್ ವಂದಿಸಿದರು.

Leave a Comment

error: Content is protected !!